Published On: Fri, Sep 2nd, 2022

ಮಂಗಳೂರಿನಲ್ಲಿ ಜಗಮೆಚ್ಚಿದ ಜನನಾಯಕ

ಮಂಗಳೂರು: ಬಂಗ್ರಕೂಳೂರಿನಲ್ಲಿ ಕಾಯ್ದಿರಿಸಲಾದ ಬೃಹತ್ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಬಂದರು ಇಲಾಖೆ ಸಚಿವ ಸರ್ಬಾನಂದ್ ಸೊನೊವಾಲ್ ಅವರು ಮೈಸೂರು ಪೇಟ ಹಾಗೂ ರತ್ನ ಮಾಲೆ ಮತ್ತು ಉಡುಪಿ ಶ್ರೀಕೃಷ್ಣನ ಸ್ಮರಣಿಕೆ ನೀಡಿ ಸ್ವಾಗತಿಸಿದರು. ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಂಗಳೂರು ಮಲ್ಲಿಗೆ ಮಾಲಾರ್ಪಣೆ ಮಾಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅವರು ಪರಶುರಾಮನ ಸ್ಮರಣಿಕೆಯನ್ನು ನೀಡಿ ಮೋದಿಯವರನ್ನು ಗೌರವಪೂರ್ವಕವಾಗಿ ಸಮಾರಂಭಕ್ಕೆ ಸ್ವಾಗತಿಸಿದರು.

modi in mangalore
modi in mangalore

ಈ ಸಂದರ್ಭ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಕರಾವಳಿಯ ಎಲ್ಲಾ ಶಾಸಕರು ಭಾಗವಹಿಸಿದ್ದರು.ಸಚಿವ ಸರ್ಬಾನಂದ್ ಸೊನೊವಾಲ್ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಪ್ರಧಾನಿಯವರು ಲೋಕಾರ್ಪಣೆ ಮಾಡಿದ 3,800 ಕೋಟಿ ಮೊತ್ತದ ಯೋಜನೆಗಳ ವಿವರ ನೀಡಿ ಸ್ವಾಗತಿಸಿದರು.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ಕರಾವಳಿಯ ಜನತೆ ಸುವರ್ಣ ಅಕ್ಷರದಲ್ಲಿ ಬರೆದಿಡಬೇಕಾದ ದಿನ ಎಂದು ಹೇಳಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter