Published On: Mon, Sep 19th, 2022

ಬಂಟ್ವಾಳ: ವಿಶ್ವಕರ್ಮ ಜಯಂತಿ ಆಚರಣೆ

ಬಂಟ್ವಾಳ: ಜಗತ್ತಿನ ಸೃಷ್ಟಿಕರ್ತ ಬ್ರಹ್ಮನ ಆಜ್ಞೆಯಂತೆ ಆಕಾರ ನೀಡಿದ ವಿಶ್ವಕರ್ಮ ದೇವರ ಜಯಂತಿ ಆಚರಣೆಗೆ ಸರ್ಕಾರ ಮಹತ್ವ ನೀಡುವ ಮೂಲಕ ಎಲ್ಲರೂ ಒಟ್ಟಾಗಲು ಪ್ರೇರಣೆ ನೀಡಿದೆ ಎಂದು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಹೇಳಿದರು.

ಬಿ.ಸಿ.ರೋಡು ಆಡಳಿತ ಸೌಧದಲ್ಲಿ ಶನಿವಾರ ನಡೆದ ತಾಲ್ಲೂಕು ಮಟ್ಟದ ವಿಶ್ವಕರ್ಮ ಜಯಂತಿ ಆಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಧ್ಯಾಪಕ ಮುರಳೀಧರ ಉಪನ್ಯಾಸ ನೀಡಿದರು. ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಸುಧಾಕರ ಆಚಾರ್ಯ ಮಾರ್ನಬೈಲು, ಕಾರ್ಯದರ್ಶಿ ಸಂದೀಪ್ ಬಿ. ಆಚಾರ್ಯ, ಗೌರವಾಧ್ಯಕ್ಷ ಮನೋಜ್ ಆಚಾರ್ಯ ನಾಣ್ಯ, , ಲೋಕೇಶ ಆಚಾರ್ಯ ಪುಂಜಾಲಕಟ್ಟೆ, ಮಹಿಳಾ ಸಮಿತಿ ಅಧ್ಯಕ್ಷೆ ಪ್ರತಿಮಾ ಆಚಾರ್ಯ, ಪ್ರಮುಖರಾದ ಸುನಿಲ್ ಬಿ.ಆಚಾರ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಆಚಾರ್ಯ, ಬೂಡ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ಉಪತಹಸೀಲ್ದಾರ್ ವಿಜಯ ವಿಕ್ರಂ, ಕಂದಾಯ ನಿರೀಕ್ಷಕ ಪ್ರಶಾಂತ್ ಶೆಟ್ಟಿ, ವಿಷಯ ನಿರ್ವಾಹಕ ವಿಷುಕುಮಾರ್ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter