Published On: Sat, Sep 24th, 2022

ಪುದು: ಗ್ರಾಮ ಪಂಚಾಯಿತಿ ಎಸ್ಸಿ ಎಸ್ಟಿ ಮೀಸಲು ಅನುದಾನ ದುರ್ಬಳಕೆ, ತನಿಖೆಗೆ ಆಗ್ರಹಿಸಿ ಸಿಇಒ ಗೆ ದೂರು

ಬಂಟ್ವಾಳ: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನ ಬೇರೆಡೆ ವಿನಿಯೋಗಿಸುವ ಮೂಲಕ ಅನುದಾನ ದುರ್ಬಳಕೆ ಮತ್ತು ಇಡೀ ಸಮುದಾಯಕ್ಕೆ ಮಾಡಿದ ಅನ್ಯಾಯ ವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ತಾಲ್ಲೂಕು ಪಂಚಾಯಿತಿ ಇಒ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಗೆ ದೂರು ಸಲ್ಲಿಸಲಾಗಿದೆ ಎಂದು ಪುದು ಬಿಜೆಪಿ ಮಹಾಶಕ್ತಿ ಕೇಂದ್ರ ಕಾರ್ಯದರ್ಶಿ ವಿಠಲ ಸಾಲ್ಯಾನ್ ಹೇಳಿದರು.

ಇಲ್ಲಿನ ಬಿ.ಸಿ.ರೋಡಿನಲ್ಲಿ ಸೆ.23ರಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಆಡಳಿತಾರೂಢ ( ಕಾಂಗ್ರೆಸ್) ಸದಸ್ಯೆ ಅನುದಾನ ದುರ್ಬಳಕೆ ಮಾಡಿರುವ ಬಗ್ಗೆ ದೂರು ನೀಡಿದ್ದರೂ ತನಿಖೆಯಾಗಿಲ್ಲ. ಇಲ್ಲಿನ ಸುಮಾರು ೧೦೦ಕ್ಕೂ ಮಿಕ್ಕಿ ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯಕ್ಕೆ ಮೂಲಭೂತ ಸೌಕರ್ಯ ನೀಡದೆ ಅನ್ಯಾಯ ಮಾಡಲಾಗಿದ್ದು, ಸುಮಾರು ರೂ ೬೦ಲಕ್ಷಕ್ಕೂ ಮಿಕ್ಕಿ ಮೊತ್ತದ ಅನುದಾನ ದುರ್ಬಳಕೆಯಾಗಿದೆ ಎಂದು ಅವರು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರವೀಂದ್ರ ಕಂಬಳಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಗಣೇಶ್ ಸುವರ್ಣ, ಸತೀಶ್ ನಾಯ್ಗ, ದಿನೇಶ್ ಶೆಟ್ಟಿ ಕೊಟ್ಟಿಂಜ ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter