ಪುತ್ತೂರು ; ಪತ್ರಕರ್ತ, ರಂಗನಿರ್ದೇಶಕ ಮೌನೇಶ ವಿಶ್ವಕರ್ಮ ರವರ ಚೊಚ್ಚಲ ಕೃತಿ ಮಕ್ಕಳ ಮಾತು ಅನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವೆ ಉಮಾಶ್ರೀ ನ.14 ರಂದು ಬೆಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.
SSS_0969

 

SSS_0970

ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆದ ಯುವಬರಹಗಾರರ ಚೊಚ್ಚಲ ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಕೃತಿ ಬಿಡುಗಡೆಗೊಂಡಿದ್ದು, ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಬಂಜಗೆರೆ ಜಯಪ್ರಕಾಶ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕನ್ನಡ ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿರಜನೀಶ್, ನಿರ್ದೇಶಕ ಕೆ.ಎ.ದಯಾನಂದ , ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎ.ಬಿ.ಇಬ್ರಾಹಿಂ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಇದೇ ಸಮಾರಂಭದಲ್ಲಿ 2011-12 ಹಾಗೂ 2012-2013ನೇ ಸಾಲಿನ ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರ ನೀಡುವ ಯುವ ಬರಹಗಾರರ ಚೊಚ್ಚಲ ಕೃತಿಯ ಪ್ರೋತ್ಸಾಹಧನಕ್ಕೆ ಆಯ್ಕೆಯಾದ ವಿವಿಧ ಬರಹಗಾರರ ಕೃತಿಗಳು ಲೋಕಾರ್ಪಣೆಗೊಂಡವು.

By suddi9

Leave a Reply

Your email address will not be published. Required fields are marked *