Published On: Tue, Oct 11th, 2022

ಕಂಬಳ ಕ್ಷೇತ್ರದ ಹಿರಿಯ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿ ನಿಧನ

ಮೂಡುಬಿದಿರೆ: ಕಂಬಳ ಕ್ಷೇತ್ರದ ಹಿರಿಯ ಯಜಮಾನ ಇರುವೈಲು ಪಾಣಿಲ ಬಾಡ ಪೂಜಾರಿ(90ವ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸೋಮವಾರ ರಾತ್ರಿ ಸ್ವಗೃಹದಲ್ಲಿ ನಿಧನ ಹೊಂದಿದರು.

ಕೃಷಿಕರಾಗಿದ್ದ ಅವರು ಕಳೆದ 23 ವರ್ಷಗಳಿಂದ ಕಂಬಳದಲ್ಲಿ ಕೋಣಗಳನ್ನು ( ತಾಟೆ ಮತ್ತು ಬೊಟ್ಟಿಮಾರ್ ) ಕಟ್ಟಿ ಬೆಳೆಸುವ ಮೂಲಕ ಹಲವು ಬಹುಮಾನಗಳನ್ನು ಗಳಿಸಿಕೊಂಡಿದ್ದರು.

I


ಕಂಬಳ ಕ್ಷೇತ್ರದಲ್ಲಿ ವಿಶ್ವ ಪ್ರಸಿದ್ಧಿಯನ್ನು ಪಡೆದಿರುವ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಈ ಯಜಮಾನಿಕೆಯ ಕೋಣಗಳನ್ನು ಓಡಿಸಿ ಗಮನ ಸೆಳೆದಿದ್ದಾರೆ.


ಪತ್ನಿ ದೇವಕಿ, ಪಾಣಿಲ ಸತೀಶ್ಚಂದ್ರ ಸಾಲ್ಯಾನ್ ಸಹಿತ ಆರು ಮಂದಿ ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter