Published On: Thu, Oct 13th, 2022

ಮಂಗಳೂರಿನಲ್ಲಿ ಮತ್ತೆ SDPI, ನಿಷೇಧಿತ PFI ಮುಖಂಡರ ಮನೆ ಮೇಲೆ ದಾಳಿ : ಐವರು ಮುಖಂಡರು ವಶಕ್ಕೆ

ಮಂಗಳೂರು: ಮಂಗಳೂರಿನ SDPI, ನಿಷೇಧಿತ PFI ಮುಖಂಡರ ಮನೆಗಳ ಮೇಲೆ ಮತ್ತೆ ದಾಳಿ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ನಡೆದಿದ್ದು, ಮನೆಯನ್ನು ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ಐವರು ಪಿಎಫ್​​ಐ ಮುಖಂಡರನ್ನ ಪೊಲೀಸರು ವಶಕ್ಕೆ ಪಡೆದು, ಪಿಎಫ್​​ಐ ಮುಂಡರ ವಿರುದ್ಧ UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್​​​ಗಳಡಿ ಕೇಸ್​ ದಾಖಲಿಸಲಾಗಿದೆ.

ಇನ್ನು ಮಂಗಳೂರು SDPI ಜಿಲ್ಕಾಧ್ಯಕ್ಷ ಅಬೂಬಕರ್ ಕುಳಾಯಿ ಮನೆ ಮೇಲು ದಾಳಿ ನಡೆಸಲಾಗಿದ್ದು, ಈ ವೇಳೆ ಮನೆಯಲ್ಲಿ ಅಬೂಬಕರ್ ಕುಳಾಯಿ ಇರಲಿಲ್ಲ ಎಂದು ತಿಳಿದುಬಂದಿದೆ.

ಆದ್ರೆ ನಿಷೇಧಿತ ಪಿಎಫ್​ ಐ ಸಂಘಟನೆಯ ಮುಖಂಡರನ್ನು ಎನ್​ಐಎ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಸಾಕಷ್ಟು ಮಾಹಿತಿಯನ್ನು ಹೊರಹಾಕಿದ್ದಾರೆ. ಇದೀಗ ಮತ್ತೊಂದು ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಪಿಎಫ್​ಐಗೆ ಟರ್ಕಿ ದೇಶದ ಜತೆ ಸಂಪರ್ಕ ಹೊಂದಿದ್ದ ಬಗ್ಗೆ ತಿಳಿದುಬಂದಿದ್ದು, ಟರ್ಕಿ, ಕತಾರ್​ ದೇಶಗಳಿಂದ ಹಣದ ಹೊಳೆಯೇ ಹರಿದುಬಂದಿದೆ ಎಂಬ ಮಾಹಿತಿ ಹೊರಬಿದ್ದಿದೆ. ಟರ್ಕಿ, ಕತಾರ್​ ದೇಶಗಳಿಂದ ಕೇರಳ ಮೂಲಕ ಪಿಎಫ್​ಐಗೆ ಹವಲಾ ಹಣ ಸಂದಾಯವಾಗುತ್ತಿತ್ತು. ನಂತರ ದೇಶದ ವಿವಿಧ ಕಡೆಗಳಲ್ಲಿರುವ ಪಿಎಫ್​ಐ ಖಾತೆಗಳಿಗೆ ವರ್ಗಾವಣೆಯಾಗುತ್ತಿತ್ತು ಎನ್ನಲಾಗುತ್ತಿದೆ. ಹೀಗೆ ಹರಿದುಬಂದ ಹಣವನ್ನು ದೇಶ ವಿರೋಧಿ ಕೃತ್ಯಕ್ಕೆ, ಸರ್ಕಾರದ ವಿರುದ್ಧದ ಪ್ರತಿಭಟನೆ, ಅಪರಾಧಿ ಕೃತ್ಯಗಳಲ್ಲಿ ಬಂಧಿತ PFI ಸದಸ್ಯರ ಕುಟುಂಬಗಳಿಗೆ ನೆರವು ಮತ್ತು ತರಬೇತಿ ಶಿಬಿರಗಳಿಗೆ ಬಳಕೆ ಮಾಡಲಾಗುತ್ತಿತ್ತು ಎಂಬೂದು ತನಿಖೆ ವೇಳೆ ತಿಳಿದುಬಂದಿದೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter