ಮದ್ರಾಸ್ ಹೈಕೋರ್ಟ್ನಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಸಾವು
ಚೆನ್ನೈ: ತನ್ನ ಮಗನಿಗಾಗಿ ಜಾತಿ ಪ್ರಮಾಣ ಪತ್ರವನ್ನು (Community Certificate) ಪಡೆಯಲು ಹೆಣಗಾಡುತ್ತಿದ್ದ ವ್ಯಕ್ತಿಯೋರ್ವ ಮದ್ರಾಸ್ ಹೈಕೋರ್ಟ್ನಲ್ಲಿ (Madras High Court) ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯನ್ನು ತಮಿಳುನಾಡಿನ (Tamil Nadu) ಕಾಂಚೀಪುರಂನ (Kancheepuram) ವೇಲ್ಮುರುಗನ್ (49) ಎಂದು ಗುರುತಿಸಲಾಗಿದೆ. ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರುವ ‘ಮಲೈಕುರವರ್’ ಎಂಬ ಜಾತಿ ಪ್ರಮಾಣಪತ್ರವನ್ನು ಪಡೆಯಲು ವೇಲ್ಮುರುಗನ್ ಓಡಾಡುತ್ತಿದ್ದರು. ಆದರೆ ಜಾತಿ ಪ್ರಮಾಣಪತ್ರ ಪಡೆಯಲು ಸಾಧ್ಯವಾಗದ ಹಿನ್ನೆಲೆ ವೇಲ್ಮುರುಗನ್ ಮಂಗಳವಾರ ಆತ್ಮಹತ್ಯೆಗೆ ಶರಣಾದರು. ಶೇ.95ರಷ್ಟು ಸುಟ್ಟ ಗಾಯಗಳಾಗಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
