ಗುರುಪುರ ಬಂಟರ ಮಾತೃ ಸಂಘ : ಸಾಮೂಹಿಕ ಸತ್ಯನಾರಾಯಣ ಪೂಜೆ
ಕೈಕಂಬ : ಗುರುಪುರ ಬಂಟರ ಮಾತೃ ಸಂಘ(ರಿ) ಇದರ ಮಹಿಳಾ ವಿಭಾಗದ ವತಿಯಿಂದ ಅ. ೨೩ರಂದು ಭಾನುವಾರ ಗುರುಪುರ ಕುಕ್ಕುದಕಟ್ಟೆಯ ಶ್ರೀ ವೈದ್ಯನಾಥ ಕಲ್ಯಾಣ ಸಮುದಾಯ ಭವನದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.

ಮಹಿಳಾ ವಿಭಾಗದ ಅಧ್ಯಕ್ಷೆ ಇಂದಿರಾಕ್ಷಿ ಪಿ. ಶೆಟ್ಟಿ ದೀಪ ಬೆಳಗಿಸಿ ಪೂಜೆಗೆ ಚಾಲನೆ ನೀಡಿದರು. ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ಉಮಾವತಿ ಎಂ. ಶೆಟ್ಟಿ ನಾಡಾಜೆಗುತ್ತು, ವೀಣಾ ಸಿ. ಶೆಟ್ಟಿ, ರಾಜ್ಕುಮಾರ್ ಶೆಟ್ಟಿ ತಿರುವೈಲುಗುತ್ತು, ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಪ್ರಮೀಳಾ ಎಲ್. ಶೆಟ್ಟಿ, ಸುದರ್ಶನ ಶೆಟ್ಟಿ ಪೆರ್ಮಂಕಿ, ಜಯರಾಮ ರೈ ಉಳಾಯಿಬೆಟ್ಟುಗುತ್ತು, ಹರೀಶ್ ಶೆಟ್ಟಿ ಉಪ್ಪುಗೂಡು, ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಪೂಜೆ ಆರಂಭಕ್ಕೆ ಮುನ್ನ ಸಂಘದ ಸದಸ್ಯರು ಭಜನೆ ಸಾದರಪಡಿಸಿದರು.
