Published On: Thu, Nov 3rd, 2022

ಆರ್.ಎಸ್.ಬಿ ಮಹಿಳಾ ವೇದಿಕೆ ಮಣಿಪಾಲ:ಮಾಹಿತಿ ಕಾರ್ಯಕ್ರಮ

ಮಣಿಪಾಲ: ರಾಜಾಪುರ ಸಾರಸ್ವತ ಬ್ರಾಹ್ಮಣ ಮಹಿಳಾ ವೇದಿಕೆ (ರಿ.)ಮಣಿಪಾಲ ಇವರ ವತಿಯಿಂದ ಮಣಿಪಾಲದ ಆರ್ ಎಸ್ ಬಿ ಸಭಾಭವನದಲ್ಲಿ ಕಾನೂನಿನ ಅರಿವು ಮತ್ತು ಹಕ್ಕುಗಳು ಹಾಗೂ ಬ್ಯಾಂಕಿಂಗ್ ವ್ಯವಹಾರದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವೈಕುಂಠ ಬಾಳಿಗ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ| ನಿರ್ಮಲ ಕುಮಾರಿ ಕೆ., ನಿವೃತ್ತ ಬ್ಯಾಂಕ್ ಅಧಿಕಾರಿಗಳಾದ ರಾಮದಾಸ್ ನಾಯಕ್ ಹಾಗೂ ಜಯರಾಮ್ ಪ್ರಭು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ರಾಜಾಪುರ ಸಾರಸ್ವತ ಸಂಘ ಮಣಿಪಾಲ ಇದರ ಅಧ್ಯಕ್ಷರಾದ ಗೋಕುಲ್ ದಾಸ್ ನಾಯಕ್,ರಾಜಾಪುರ ಸಾರಸ್ವತ ಮಹಿಳಾ ವೇದಿಕೆಯ ಅಧ್ಯಕ್ಷರಾದ ಗೀತಾ ನಾಯಕ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter