ಶ್ರೀರಾಮ ಸೆಕೆಂಡರಿ ಸ್ಕೂಲ್ನ ನೂತನಕಟ್ಟಡಕ್ಕೆ ಶಿಲಾನ್ಯಾಸ
ಕಲ್ಲಡ್ಕ: ರಾಷ್ಟ್ರೀಯ ಶಿಕ್ಷಣ ನೀತಿಯನ್ವಯ ಪ್ರಾರಂಭಗೊಂಡ ಶ್ರೀರಾಮ ಸೆಕೆಂಡರಿ ಸ್ಕೂಲ್ಕಲ್ಲಡ್ಕಇದರ ನೂತನಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ ರಜನಿಕಾಂತ್ ವಾಝೆ ಮುಂಬೈ, ಶರದ್ ಶೆಟ್ಟಿ ಐರಿಷ್ ಗ್ಲೋಬಲ್ ಮೀಡಿಯಾ ಮುಂಬೈ, ರಾಕೇಶ್ ಶರ್ಮ ಮುಂಬೈಇವರು ನೆರವೇರಿಸಿದರು.

ಕಾರ್ಯಕ್ರಮದ ಬಳಿಕ ಅತಿಥಿಗಳು ವಿದ್ಯಾಕೇಂದ್ರದ ಶಿಶುಮಂದಿರ ಹಾಗೂ ಪ್ರಾಥಮಿಕ ಶಾಲೆಗೆ ಬೇಟಿ ನೀಡಿ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿಉಡುಪಿ ನಗರಅಧ್ಯಕ್ಷರಾದ ಮಹೇಶ್ಠಾಕೂರ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷಡಾ.ಪ್ರಭಾಕರ ಭಟ್ ಕಲ್ಲಡ್ಕ, ವಿದ್ಯಾಕೇಂದ್ರದ ಅಧ್ಯಕ್ಷರಾದ ಬಿ.ನಾರಾಯಣ ಸೋಮಯಾಜಿ, ಸಂಚಾಲಕರಾದ ವಸಂತ ಮಾಧವ, ಆಡಳಿತ ಮಂಡಳಿ ಸದಸ್ಯರು, ವಿಭಾಗ ಮುಖ್ಯಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

