Published On: Fri, Mar 3rd, 2023

ಮೂಡುಬಿದಿರೆ ಜಿ.ಕೆ ಎಂಟರ್‌ಪ್ರೈಸಸ್ ಮಾಲೀಕ ಗಣೇಶ್ ಕಾಮತ್ ನಿಧನ

ಮೂಡುಬಿದಿರೆ: ಜಿ.ಕೆ. ಎಂಟರ್‌ಪ್ರೈಸಸ್ ಮಾಲಕ ಗಣೇಶ್ ಕಾಮತ್ ಶುಕ್ರವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರಿ ಅಗಲಿದ್ದಾರೆ.

ಮೂಡುಬಿದಿರೆಯಲ್ಲಿರುವ ತನ್ನ ಎಂಟರ್ ಪ್ರೈಸಸ್‌ಗೆ ಆಗಮಿಸುತ್ತಿದ್ದಾಗ ಹೃದಯದ ನೋವಿಗೊಳಗಾಗಿ ಆಸ್ಪತ್ರೆ ಸೇರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಕಾರ್ಕಳದ ಗಾಂಧಿ ಮೈದಾನದಲ್ಲಿ ಹಗಲು-ರಾತ್ರಿ ಕ್ರಿಕೆಟ್ ಪಂದ್ಯಾಟಕ್ಕಾಗಿ ಲೈಟಿಂಗ್ಸ್ ಅಳವಡಿಸುತ್ತಿದ್ದಾಗ ವಿದ್ಯುತ್ ಆಘಾತಕ್ಕೊಳಗಾಗಿ ತನ್ನೆರಡು ಕೈಗಳನ್ನು ಕಳೆದುಕೊಂಡರೂ ಧೃತಿಗೆಡದೆ ತನ್ನದೇ ಆದ ಜಿ.ಕೆ. ಎಂಟರ್‌ಪ್ರೈಸಸ್ ಉದ್ಯಮವನ್ನು ಪ್ರಾರಂಭಿಸಿದ್ದರು. ಕಳೆದ ಕೆಲವು ವರ್ಷಗಳ ಹಿಮದೆಯಷ್ಟೆ ಪಡುಮಾರ್ನಾಡಿನಲ್ಲಿ ಜಿ.ಕೆ ಗಾರ್ಡನ್ ಅನ್ನು ಪ್ರಾರಂಭಿಸಿ ಮುನ್ನಡೆಸುತ್ತಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter