ಕಾಂಗ್ರೆಸ್ ನ ೧೪ ದಿನಗಳ ‘ಬಂಟ್ವಾಳ ಪ್ರಜಾಧ್ವನಿಯಾತ್ರೆ’ಗೆ ಪುಂಚಮೆ ಜಂಕ್ಷನ್ ನಲ್ಲಿ ಚಾಲನೆ
ಕೈಕಂಬ: ಮಾಜಿ ಸಚಿವ ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಪ್ರತಿ ಗ್ರಾಮಗಳನ್ನು ತಲುಪುವ ‘ಬಂಟ್ವಾಳಪ್ರಜಾಧ್ವನಿಯಾತ್ರೆ’ ಗೆ ಪೊಳಲಿ ಸಮೀಪದ ಪುಂಚಮೆ ಜಂಕ್ಷನ್ ನಲ್ಲಿ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು.

ಮಾ. ೨೩ ರವರೆಗೆ ೧೪ ದಿನಗಳ ಕಾಲ ನಡೆಯುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಪಾರಿವಾಳವನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.ಇದೇ ವೇಳೆ ‘ಕಾಂಗ್ರೆಸ್ ಗ್ಯಾರಂಟಿ ಕಾರ್ಡ’ನ್ನು ಬಿಡುಗಡೆಗೊಳಿಸಿದ ವಿ.ಪ.ಸದಸ್ಯ ಹರೀಶ್ ಕುಮಾರ್ ಬಳಿಕ ಮಾತನಾಡಿ,ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಸಾವಿರಗಟ್ಟಲೆ ಕೋಟಿ ರೂಪಾಯಿ ಅನುದಾನದಲ್ಲಿ ಸಾಮಾನ್ಯ ಜನರಿಗೂ ಅನುಕೂಲವಾಗುವ ರೀತಿಯ ಅಭಿವೃದ್ದಿ ಕಾರ್ಯಕ್ರಮಗಳನ್ನು ರಮಾನಾಥ ರೈ ಅವರು ಬಂಟ್ವಾಳಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದಾರೆ.

ಕಳೆದ ಚುನಾವಣೆಯಲ್ಲಿ ಬಿಜೆಪಿಯ ಅಪಪ್ರಚಾರದಿಂದ ಸೋತರೂ, ಮಾನಸಿಕವಾಗಿ ಕುಂದದೆ ಯಾವುದೇ ರೀತಿಯಲ್ಲೂ ಸೋಲದೆ ಕ್ಷೇತ್ರದ ಜನರ ಮಧ್ಯೆ ನಿರಂತರ ಸಂಪರ್ಕ ಸಾಧಿಸುವ ಮೂಲಕ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿದ್ದಾರೆ ಎಂದರು.ಸಿದ್ದಾರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಕಾಲದ ಐದುವರ್ಷದಲ್ಲಿ ಮಾಡಿರುವ ಬಂಟ್ವಾಳ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ದಿ ಕೆಲಸಗಳು ಹಾಗೂ ಈಗಿನ ಶಾಸಕರು ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ತುಲನೆ ಮಾಡುವ ಸಂದರ್ಭ ಇದಾಗಿದೆ ಎಂದ ಅವರು ಪ್ರತಿಯೋರ್ವ ಕಾರ್ಯಕರ್ತರು ರೈ ಅವರು ಮಾಡಿರುವ ಸಾಧನೆಯನ್ನು ಮನೆಮನೆಗೆ ತಲುಪಿಸಬೇಕು ಎಂದರು.

ಮುAದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಬಹುಮತದಲ್ಲಿ ಅಧಿಕಾರಕ್ಕೆ ಬರಲಿದ್ದು, ಪಕ್ಷ ನೀಡಿರುವ ಗ್ಯಾರಂಟಿ ಸವಲತ್ತುಗಳನ್ನು ತಕ್ಷಣ ಜಾರಿಗೆ ಬರಲಿದೆ ಎಂದ ಹರೀಶ್ ಕುಮಾರ್ ಭ್ರಷ್ಟಾಚಾರದ, ಕಮಿಷನ್ ಆಧಾರದ ಸರಕಾರವನ್ನು ಜನ ಕಿತ್ತೊಗೆಯುವ ದಿನ ದೂರವಿಲ್ಲ. ಜನ ಕೇವಲ ಒಂದೆರಡು ದಿನ ಮಾತ್ರ ತಡೆದುಕೊಳ್ಳಿ. ಬಳಿಕ ಕಾಂಗ್ರೆಸ್ ಹಾಗೂ ರಮಾನಾಥ ರೈ ಕೈಗೆ ಅಧಿಕಾರ ಬಂದು ಜನರ ಕಷ್ಟಗಳಿಗೆ ಸ್ಪಂದಿಸಲಿದ್ದಾರೆ ಎಂದು ಭರವಸೆ ನೀಡಿದರು.
ಯಾತ್ರೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಬಿರಮಾನಾಥ ರೈ ಮಾತನಾಡಿ, ನನ್ನ ಶಾಸಕತ್ವದ ಅವಧಿ ಕಳೆದ ಬಳಿಕ ಬಂಟ್ವಾಳ ಕ್ಷೇತ್ರದಲ್ಲಿ ಬಡವರಿಗೆ ಒಂದೇ ಒಂದು ಮನೆ ಒದಗಿಸಿದ್ದು ಸಾಬೀತುಪಡಿಸಲಿ ಎಂದು ಸವಾಲು ಹಾಕಿದರು. ರಾಜ್ಯದಲ್ಲಿ ಅತೀ ಹೆಚ್ಚು ೯೪ಸಿ ಹಕ್ಕು ಪತ್ರ, ವಸತಿ ಯೋಜನೆಯಡಿ ಅತೀ ಹೆಚ್ಚು ಮನೆ ಒದಗಿಸಲಾಗಿದೆ. ಅತೀ ಹೆಚ್ಚು ಅಂಗನವಾಡಿಗಳನ್ನು ನಿರ್ಮಿಸಲಾಗಿದೆ. ನನ್ನ ಅವಧಿಯ ಬಳಿಕ ಜನಪರ ಯೋಜನೆ ಒಂದೂ ಕಾರ್ಯಗತಗೊಂಡಿಲ್ಲ ಎಂದರು.
ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ರಮಾನಾಥ ರೈ ನೇತೃತ್ವದ ನಿಯೋಗ ಪುಂಚಮೆ ಜಂಕ್ಷನ್ ನಿಂದ ಆರಂಭಿಸಲಾಗಿದೆ.
ಬAಟ್ವಾಳ ವೆಂಕಟರಮಣ ದೇವಸ್ಥಾನ, ಅಗ್ರಹಾರ ಚರ್ಚ್, ಬಂಟ್ವಾಳ ಕೆಳಗಿನಪೇಟೆ ಜುಮಾ ಮಸೀದಿ ಮುಂತಾದ ಧಾರ್ಮಿಕ ಕೇಂದ್ರಕ್ಕೆ ತೆರಳಿ ಪ್ರಾರ್ಥಿಸಿ ಯಾತ್ರೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಯಾತ್ರಾ ಸಂಚಾಲಕ ಪಿಯೂಸ್ ಎಲ್ ರೋಡ್ರಿಗಸ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮುಲ್ಕಿ, ಬಂಟ್ವಾಳ ಪುರಸಭಾಧ್ಯಕ್ಷ ಮುಹಮ್ಮದ್ ಶರೀಫ್ ಶಾಂತಿಅAಗಡಿ, ಸದಸ್ಯರುಗಳಾದ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ವಾಸು ಪೂಜಾರಿ, ಮುಹಮ್ಮದ್ ನಂದರಬೆಟ್ಟು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಬಿ ಎಂ ಅಬ್ಬಾಸ್ ಅಲಿ, ಇಬ್ರಾಹಿಂ ನವಾಝ್ ಬಡಕಬೈಲು, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಸದಾಶಿವ ಬಂಗೇರ, ಕೆ ಪದ್ಮನಾಭ ರೈ, ಮಲ್ಲಿಕಾ ಶೆಟ್ಟಿ, ಸುರೇಶ್ ಜೋರ, ಪದ್ಮನಾಭ, ಪ್ರತ್ವಿರಾಜ್, ಸುನೀಲ್,ಮಾಲತಿ, ಪ್ರೇಮಲತಾ, ಅರ್ಶದ್ ಸರವು, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಜಯಂತಿ ವಿ ಪೂಜಾರಿ, ಲವೀನಾ ವಿಲ್ಮಾ ಮೊರಾಸ್, ಜಾಸ್ಮಿನ್ ಡಿ ಸೋಜ,ಪ್ಲೋಸಿ ಡಿಸೋಜ, ಸಿದ್ದೀಕ್ ಸರವು, ಸಿರಾಜ್ ಮದಕ, ಇಬ್ರಾಹಿಂ ಗುಂಡಿ, ಸಂದೇಶ್ ಶೆಟ್ಟಿ, ಬಿಕ್ನಾಜೆ, ಮಧುಸೂಧನ ಶೆಣೈ, ಮಲ್ಲಿಕಾ ಪಕಳ, ಶಬೀರ್ ಸಿದ್ದಕಟ್ಟೆ, ಡೆಂಝಿಲ್ ನೊರೊನ್ಹಾ, ತಿಲಕ್ ಮಂಚಿ, ಸಂಜಿತ್ ಪೂಜಾರಿ, ವೆಂಕಪ್ಪ ಪೂಜಾರಿ, ವೀನಾಉಪೇಂದ್ರ ಆಚಾರ್ಯ ಉಪಸ್ಥಿತರಿದ್ದರು.
ಕರಿಯಂಗಳ ಗ್ರಾ ಪಂ ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ ಸ್ವಾಗತಿಸಿ, ಮಾಣಿ ಗ್ರಾ ಪಂ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಕಾರ್ಯಕ್ರಮ ನಿರೂಪಿಸಿದರು.