????????????????????????????????????

ಬಂಟ್ವಾಳ:ಇಲ್ಲಿನ ಸಜಿಪಮೂಡ ಗ್ರಾಮದ ಬೊಳ್ಳಾಯಿ ಪ್ರಧಾನ ಕಚೇರಿ ಹೊಂದಿರುವ ಪ್ರತಿಷ್ಠಿತ ಸಜಿಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 11ನೇ ಶಾಖೆ ಇದೇ 2 ರಂದು ಬೆಳಿಗ್ಗೆ 10 ಗಂಟೆಗೆ ಸಾಲೆತ್ತೂರು ರಥನ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ.


ಕಳೆದ 1991ರಲ್ಲಿ ಮೂರ್ತೆದಾರಿಕೆ ಕುಲ ಕಸುಬುದಾರರ ಶ್ರೇಯೋಭಿವೃದ್ಧಿ ಸಂಘ ಆರಂಭಗೊಂಡು, 2005ರಲ್ಲಿ ಬ್ಯಾಂಕಿಂಗ್ ವ್ಯವಹಾರ ಆರಂಭಿಸಿದೆ. ಒಟ್ಟು 25 ಶಾಖೆ ಹೊಂದಿರುವ ಈ ಸಹಕಾರಿ ಸಂಘವು ಬೋಳಂತೂರು, ಚೇಳೂರು, ಫಜೀರು, ವಾಮದಪದವು, ಸಿದ್ಧ್ದಕಟ್ಟೆ, ಅಣ್ಣಳಿಕೆ, ಮಾರ್ನಬೈಲು, ಮಣಿಹಳ್ಳ, ಎನ್.ಸಿ.ರೋಡು ಮತ್ತಿತರ ಕಡೆಗಳಲ್ಲಿ ಶಾಖೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ.





ಗ್ರಾಹಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ, ಹಿರಿಯ ನಾಗರಿಕರು, ಸಂಘ ಸಂಸ್ಥೆಗಳಿಗೆ ಶೇ 0.5 ಹೆಚ್ಚುವರಿ ಬಡ್ಡಿ, ಆರ್ ಟಿ ಜಿ ಎಸ್, ನೆಫ್ಟ್ ಸೌಲಭ್ಯ, ಸಿದ್ಧಕಟ್ಟೆ ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯವೂ ಇದೆ. ಗುರುಶ್ರೀ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ, ವಿದ್ಯಾರ್ಥಿ ವೇತನ, ಅನಾರೋಗ್ಯ ಪೀಡಿತ ಮೂರ್ತೆದಾರರಿಗೆ ಸಹಾಯಧನ ನೀಡುತ್ತಿದೆ. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಹಿತ ಎಲ್ಲಾ ಶಾಖೆಗಳಲ್ಲಿ ಮಹಿಳಾ ಸಿಬಂದಿಗಳೇ ಕಾರ್ಯನಿರ್ವಹಿಸುತ್ತಿರುವುದು ಈ ಸಂಸ್ಥೆಯ ವೈಶಿಷ್ಟ್ಯ ಎಂದು ಸಂಘದ ಸ್ಥಾಪಕಾಧ್ಯಕ್ಷ ಕೆ.ಸಂಜೀವ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *