ರೈ ಯವರನ್ನು ಗೆಲ್ಲಿಸುವುದೇ ನಮ್ಮ ಗುರಿ: ಅಶ್ವಿನಿ ಕುಮಾರ್ ರೈ
ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರು ಆರು ಬಾರಿ ಶಾಸಕರಾಗಿ,ಮೂರು ಬಾರಿ ಸಚಿವರಾಗಿ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಇದು ಅವರ ಕೊನೆ ಚುನಾವಣಾ ಸ್ಪರ್ಧೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವುದು ನಮ್ಮೆಲ್ಲರ ಗುರಿಯಾಗಿದೆ ಎಂದು ನ್ಯಾಯವಾದಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ಅಶ್ವನಿ ಕುಮಾರ್ ರೈ ಹೇಳಿದ್ದಾರೆ.

ಬಂಟ್ವಾಳದ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನಗೆ ನೀಡಿದ ಅವಕಾಶದಲ್ಲಿ ರಮಾನಾಥ ರೈ ಅವರು ಜನರ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದು, ಅವರ ಕೆಲಸದ ಕುರಿತು ಗೌರವವಿದೆ ಎಂದು ಹೇಳಿದರು.
ನಮ್ಮ ನಡುವೆ ವ್ಯತ್ಯಾಸವಿತ್ತಾದರೂ,ಅವರನ್ನು ತಾನೆಂದು ದೂಷಿಸುವುದಾಗಲೀ,ಅಗೌರವದಿಂದ ಕಂಡಿಲ್ಲ,ಎಲ್ಲವನ್ನು ಮರೆತು ರಮಾನಾಥ ರೈ ಅವರ ಗೆಲುವೇ ನಮ್ಮ ಮುಖ್ಯ ಗುರಿಯಾಗಿದೆ ಎಂದ ಅವರು ಒಂಭತ್ತನೇ ಬಾರಿ ಅವರ ಸ್ಪರ್ಧೆಗೆ ಪಕ್ಷದ ಹೈಕಮಾಂಡ್ ಅವಕಾಶ ನೀಡಿದ್ದು, ಅವರನ್ನು ಗೆಲ್ಲಿಸುವ ಜವಾಬ್ದಾರಿ ಪಕ್ಷದ ಕಾರ್ಯಕರ್ತರಿಗೆ ಮಾತ್ರವಲ್ಲ ಕ್ಷೇತ್ರದ ಜನರಿಗೂ ಇದೆ ಎಂದರು.
ಕಳೆದ ಬಾರಿ ಅಪಪ್ರಚಾರದಿಂದ ಸೋಲಾಯಿತು. ಇನ್ನೊಂದು ಬಾರಿ ಬಂಟ್ವಾಳ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ ಕಾಣಬೇಕಾದರೆ ರಮಾನಾಥ ರೈಗಳನ್ನು ಗೆಲ್ಲಿಸಬೇಕು ಎಂದ ಅಶ್ವನಿಕುಮಾರ್ ರೈ ರಾಜ್ಯದಲ್ಲಿ ಸಿದ್ದರಾಮಯ್ಯ ಸರಕಾರ ಇದ್ದಾಗ ನಾವು ನೀಡಿದ್ದ ಎಲ್ಲಾ ಭರವಸೆ ಈಡೇರಿಸಿದೆ ಎಂದರು.
ರಾಜಧರ್ಮವನ್ನು ಪಾಲಿಸದ ವಚನಭ್ರಷ್ಟ ಸರಕಾರ ಈಗಿದ್ದು, ಬಿಜೆಪಿ ತಾವು ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಅದು ಅತ್ಯಂತ ಜನವಿರೋಧಿ ಸರಕಾರವಾಗಿದ್ದು, ಭ್ರಷ್ಟಾಚಾರ ಕೇಂದ್ರಿತವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ರಾಜ್ಯ ಬಿಜೆಪಿ ಸರಕಾರದ ನೀತಿ,ಯೋಜನೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಒಂದೇ ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಪಕ್ಷ ಎಂದರು.
ಮಾಜಿ ಶಾಸಕ ಮೊಹಿದ್ದೀನ್ ಭಾವ ಅವರು ಟಿಕೇಟ್ ಸಿಕ್ಕಿಲ್ಲ ಎಂಬ ಕಾರಣಕ್ಕೆ ಟಿಕೇಟ್ ಮಾರಾಟವಾಗಿದೆ ಎಂಬ ಆಧಾರ ರಹಿತವಾದ ಆರೋಪವನ್ನು ಮಾಡಿದ್ದಾರೆ ಎಂದು ಪ್ರಶ್ನೆತೊಂದಕ್ಕೆ ಉತ್ತರಿಸಿದ ಅವರ ದಲಿತರ ಪರವಾಗಿ ಕಾಂಗ್ರೆಸ್ ಎಲ್ಲಾ ಸಂದರ್ಭದಲ್ಲು ಧ್ವನಿಎತ್ತಿದೆ.ಈಬಾರಿ ರಾಜ್ಯದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಪ್ರಮುಖರಾದ ಪಿಯೂಸ್ ಎಲ್.ರೋಡ್ರಿಗಸ್, ಪದ್ಮಶೇಖರ ಜೈನ್, ಸುದರ್ಶನ ಜೈನ್, ಬಿ.ಎಚ್.ಖಾದರ್, ಸುದೀಪ್ ಕುಮಾರ್ ಶೆಟ್ಟಿ, ಲುಕ್ಮಾನ್ ಬಂಟ್ವಾಳ, ಬೇಬಿ ಕುಂದರ್, ಅಬ್ಬಾಸ್ ಆಲಿ, ಮೋಹನ ಗೌಡ,ಎಂ. ಚಂದ್ರಶೇಖರ ಪೂಜಾರಿ, ಉಮೇಶ್ ಬೋಳಂತೂರು, ಸುಭಾಶ್ಚಂದ್ರ ಶೆಟ್ಟಿ, ಸಂಜೀವ ಪೂಜಾರಿ, ಬಿ.ಮೋಹನ್, ಕುಶಾಲಪ್ಪ, ಜೆಸಿಂತಾ ಡಿಸೋಜ, ಜಯಂತಿ ಪೂಜಾರಿ, ನಾರಾಯಣ ನಾಯ್ಕ್, ರಫೀಕ್, ಸದಾಶಿವ ಬಂಗೇರ, ಇಬ್ರಾಹಿಂ ನವಾಜ್, ಸುರೇಶ್ ಜೋರ, ಲವೀನಾ ವಿಲ್ಮಾ ಮೊರಾಸ್, ಮಹಮ್ಮದ್ ವಳವೂರು, ಪರಮೇಶ್ವರ ಮೂಲ್ಯ, ಮಹಮ್ಮದ್ ನಂದರಬೆಟ್ಟು , ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.