ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿ: ಸೈಕಲ್ ಜಾಥಾ
ಉಡುಪಿ:ಶ್ರೀ ಪೂರ್ಣ ಪ್ರಜ್ಞಾ ಸಂಧ್ಯಾ ಕಾಲೇಜು ಉಡುಪಿಯ ಇಕೋ ಕ್ಲಬ್ ವತಿಯಿಂದ ಪ್ಲಾಸ್ಟಿಕ್ ನಿರ್ಮೂಲನೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ ಉಡುಪಿಯ ನಗರದಲ್ಲಿ ನಡೆಯಿತು.ಕಾಲೇಜಿನ ಪ್ರಾಂಶುಪಾಲರಾದ ಡಾ.ಸುಕನ್ಯಾ ಮೇರಿ ಜೆ ಅವರು ಹಸಿರು ನಿಶಾನೆಯನ್ನು ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಉಪಪ್ರಾಂಶುಪಾಲರಾದ ವಿನಾಯಕ್ ಪೈ, ರೋವರ್ಸ್ ರೇಂಜರ್ಸ್ ಸಂಯೋಜಕರಾದ ದಿನೇಶ್ ಆರ್,ಇಕೋ ಕ್ಲಬ್ ನ ಸಂಯೋಜಕರಾದ ನಾಗರಾಜ್ ಆಚಾರ್ಯ ಗಿಳಿಯಾರು ಉಪಸ್ಥಿತರಿದ್ದರು.ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಜಾಥಾದಲ್ಲಿ ಭಾಗವಹಿಸಿದರು.