Published On: Sat, Jul 1st, 2023

ಬಂಟ್ವಾಳ: ‘ಬಿಜೆಪಿ ವಿಶೇಷ ಜನಸಂಪರ್ಕ ಅಭಿಯಾನ’


ಬಂಟ್ವಾಳ:ಜಗತ್ತಿನಲ್ಲಿ ಭಾರತಕ್ಕೆ ಉನ್ನತ ಸ್ಥಾನಮಾನ ಸಹಿತ ಗೌರವ ತಂದು ದೇಶ ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಇವರ ಸಮರ್ಥ ನಾಯಕತ್ವಕ್ಕೆ ದೇಶದ ಜನತೆ ಬೆಂಬಲ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ನೇತೃತ್ವದ ಇದೇ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.


ಇಲ್ಲಿನ ಬಿ.ಸಿ.ರೋಡು ಸ್ಪರ್ಶ ಸಭಾಂಗಣದಲ್ಲಿ ಕ್ಷೇತ್ರ ಬಿಜೆಪಿ ಸಮಿತಿ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ಬಿಜೆಪಿ ವಿಶೇಷ ಜನಸಂಪರ್ಕ ಅಭಿಯಾನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.


ಬಂಟ್ವಾಳ ಬಿಜೆಪಿ ಕ್ಷೇತ್ರ್ರಾಧ್ಯಕ್ಷ ದೇವಪ್ಪ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾಪ್ಟನ್ ಗಣೇಶ ಕಾಣರ್ಿಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ.ಹರಿಕೃಷ್ಣ ಬಂಟ್ವಾಳ್ ಶುಭ ಹಾರೈಸಿದರು.

ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ.ಪದ್ಮನಾಭ ಕೊಟ್ಟಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ರಾಜ್ಯ ವಕ್ತಾರ ವಿಕಾಸ್ ಪುತ್ತೂರು, ಹಿರಿಯ ಪ್ರಕೋಷ್ಟ ಸಂಚಾಲಕ ಗೋಪಾಲ ಸುವರ್ಣ ಮತ್ತಿತರರು ಇದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter