Published On: Sat, Jul 1st, 2023

ಮಜಿ ದ. ಕ. ಜಿ. ಪಂ. ಹಿ. ಪ್ರಾ. ಶಾಲೆಯಲ್ಲಿ “ಗುರುವಂದನಾ” ಕಾಯ೯ಕ್ರಮ

ಬಂಟ್ವಾಳ: ಯಾವುದೇ ಫಲಾಪೇಕ್ಷೆ ಬಯಸದೆ ತನ್ನ ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯ ಕಲ್ಪಿಸುವುದರಲ್ಲಿಯೇ ತೃಪ್ತಿ ಕಾಣುವ ಗುರುವಿಗೆ ಗುರುವಂದನೆ ಸಲ್ಲಿಸುವುದು ಆದ್ಯಕರ್ತವ್ಯವಾಗಿದೆ ಎಂದು ಕನಾ೯ಟಕ ರಾಜ್ಯ ಸರಕಾರಿ ನೌಕರರ  ಸಂಘದ ಬಂಟ್ವಾಳ ಶಾಖೆಯ ಅಧ್ಯಕ್ಷರಾದ  ಉಮಾನಾಥ ರೈ ಮೇರಾವು ಹೇಳಿದ್ದಾರೆ. ವೀರಕಂಬಗ್ರಾಮದ ಮಜಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ “ಗುರುವಂದನಾ” ಕಾಯ೯ಕ್ರಮದಲ್ಲಿ ನಿವೃತ್ತಿ ಹೊಂದಿದ ಮಜಿ ಶಾಲಾ ಮುಖ್ಯ ಶಿಕ್ಷಕ  ನಾರಾಯಣ ಪೂಜಾರಿ ಎಸ್ ಕೆ ಯವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ರಾದ  ಶಿವಪ್ರಸಾದ್ , ನಿವೃತ್ತ ಶಿಕ್ಷಕ ನಾರಾಯಣ ಗೌಡ ರವರು ಅತಿಥಿಗಳಾಗಿದ್ದು,ಸಮಯೋಚಿತವಾಗಿ  ಮಾತನಾಡಿದರು.ಇದೇ ವೇಳೆ  ನಿವೃತ್ತಿಯಾಗುತ್ತಿರುವ ಮುಖ್ಯ ಶಿಕ್ಷಕರನ್ನು ಶಾಲಾವತಿಯಿಂದ, ಬಂಟ್ವಾಳ ತಾಲೂಕು ಶಿಕ್ಷಕರ ಸಂಘ,ವೀರಕಂಬ ಗ್ರಾಮಪಂಚಾಯತ್  , ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ನಿವೃತ್ತಿಹೊಂದಿದ ಶಾಲಾ ಮುಖ್ಯ ಶಿಕ್ಷಕ  ನಾರಾಯಣ ಪೂಜಾರಿ ಎಸ್ ಕೆ ಅವರು ಶಿಕ್ಷಕನಾಗಿ ತನ್ನ 30 ವಷ೯ಗಳ ಸೇವೆ ಹಾಗೂ ಮಜಿ ಶಾಲೆಯ ಮುಖ್ಯ ಶಿಕ್ಷಕ ನಾಗಿ ಎಂಟು ವರ್ಷಗಳ ಸೇವೆಯನ್ನು ಸ್ಮರಿಸಿ ತನಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರಲ್ಲದೆ ಶಾಲಾಭಿವೃದ್ಧಿ ಸಮಿತಿ, ಪಂಚಾಯತ್ ಅಧ್ಯಕ್ಷರು, ಸದಸ್ಯರು, ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಸದಸ್ಯರು, ಶಾಲಾ ಸಹಶಿಕ್ಷಕರು, ಅಡುಗೆ ಸಿಬ್ಬಂದಿ, ಶಾಲಾ ವಾಹನ ಚಾಲಕರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.ಶಾಲೆಗೆ 5 ಮರದ ಕುಚಿ೯ಗಳನ್ನು ಹಾಗೂ  ಎಲ್ಲಾ ವಿದ್ಯಾರ್ಥಿಗಳಿಗೆ ಪೆನ್ಸಿಲ್ ಬಾಕ್ಸ್ ಗಳನ್ನು ಕೊಡುಗೆಯಾಗಿ ನೀಡಿದರು.

ಕಾಯ೯ಕ್ರಮದ ಅಧ್ಯಕ್ಷತೆಯನ್ನು  ವೀರಕಂಭ ಗ್ರಾಮ ಪಂಚಾಯತ್ ನ ಅಧ್ಯಕ್ಷ ರಾದ ದಿನೇಶ್ ರವರು ವಹಿಸಿದ್ದರು. ಶಾಲಾಸ್ಥಳದಾನಿ ತಿರುಮಲ ಕುಮಾರ್ ಮಜಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಜಯಂತಿ ಜನಾರ್ಧನ್, ಜಯಪ್ರಸಾದ್, ಸಂದೀಪ್, ನಿಕಟಪೂರ್ವ ತಾಲೂಕು ಪಂಚಾಯತ್ ಸದಸ್ಯೆ  ಗೀತಾ ಚಂದ್ರಶೇಖರ್,   ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಫ್ರಾನ್ಸಿಸ್ ಡೇಸಾ, ವೀರಕಂಬ ಗ್ರಾ.  ಪಂ. ಪಿಡಿಒ ನಿಶಾಂತ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಮೇಶ್ ಗೌಡ ಮೈರಾ, ಹಿರಿಯ ವಿದ್ಯಾರ್ಥಿ ಈಶ್ವರ್ ಭಟ್ ರಾಯ್ಕೋಡಿ,ಮುಖ್ಯೋಪಾಧ್ಯಾಯ ಸಂಘದ ಜಿಲ್ಲಾ  ಪ್ರಧಾನ ಕಾರ್ಯದರ್ಶಿ ಪುಟ್ಟರಂಗನಾಥ್, ರಾಜ್ಯ ಸರಕಾರಿ ನೌಕರರ ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸಂತೋಷ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಬಂಟ್ವಾಳ ತಾಲೂಕು ಕಾರ್ಯದರ್ಶಿ ಯತೀಶ್, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಮನ್ವಯಾಧಿಕಾರಿ  ರಾಘವೇಂದ್ರ ಬಲ್ಲಾಳ್, ಕಲ್ಲಡ್ಕ ಕ್ಲಸ್ಟರ್ ಸಿ ಆರ್ ಪಿ  ಜ್ಯೋತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಹಿರಿಯ ಶಿಕ್ಷಕಿ ಶಕುಂತಳಾ ಎಂ .ಬಿ ಸ್ವಾಗತಿಸಿದರು. ಶಿಕ್ಷಕಿಯರಾದ ಅನುಷಾ ರವರು ಪ್ರಸ್ತಾವನೆಗೈದರು. ಜಯಲಕ್ಷ್ಮಿ ಸನ್ಮಾನ ಪತ್ರ ವಾಚಿಸಿದರು. ಶ ಮುರ್ಷೀದಾ ಬಾನು ವಂದಿಸಿದರು.  ಸಂಗೀತ ಶರ್ಮ ಪಿ. ಜಿ  ಕಾರ್ಯಕ್ರಮ ನಿರೂಪಿಸಿದರು. ಶಾಲಾ ಶಿಕ್ಷಕರು ಸಹಕರಿಸಿದರು 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter