ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ
ಬಂಟ್ವಾಳ: ತಾಲೂಕಿನ ಪೆರಾಜೆ ಗ್ರಾಮದ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಹ್ಲಾದ್ ಜೆ. ಶೆಟ್ಟಿರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳಲ್ಲಿ
ಸೂಕ್ತವಾಗಿರುವ ಪ್ರತಿಭೆಯನ್ನು ಹೊರ ತರುವಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ತರಬೇತಿ ಅತ್ಯಗತ್ಯವಾಗಿದೆ. ವಿದ್ಯಾ ರ್ಥಿಗಳು ಇಂತಹ
ಸಹಪಠ್ಯ ಚಟುವಟಿಕೆಗಳ ತರಬೇತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಅವರ ಕೌಶಲ್ಯಗಳು ವೃದ್ಧಿಗೊಳ್ಳುತ್ತದೆ ಎಂದರು.

ಚೆಸ್ ತರಬೇತುದಾರರಾದ ಡೆನ್ಸಿಲ್ ಕುಟಿನ್ನರವರು ಮಾತನಾಡಿ ಮಕ್ಕಳು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಹಾಗೂ ಸೃಜನಶೀಲತೆಯನ್ನು ಮೈಗೂಡಿಕೊಳ್ಳಲು ಚೆಸ್ ನಂತಹ ಸಹಪಠ್ಯ ಚಟುವಟಿಕೆಗಳು ಗಮನಾರ್ಹ ಪಾತ್ರ ವಹಿಸುತ್ತದೆ ಎಂದರು.
ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ವಿ. ಶೆಟ್ಟಿ, ಕರಾಟೆ ತರಬೇತುದಾರ ಮೋಹನ್, ಶಾಲಾ ಚಿತ್ರಕಲಾ ಶಿಕ್ಷಕರಾದ ಶ್ರೀಕಾಂತ್,ಸಹ ಶಿಕ್ಷಕಿಯರಾದ ಹಂಸವೇಣಿ, ಐಡಾ ಫಿಲೋಮಿನ ಲೋಬೋ ಉಪಸ್ಥಿತರಿದ್ದರು.ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆರವರು ಪ್ರಾಸ್ತಾವನೆಗೈದರು.
ಶಿಕ್ಷಕಿ ರೀಟಾ ಫೇರ್ನಾಂಡಿಸ್ ಸ್ವಾಗತಿಸಿ, ಮಮತಾ ವಂದಿಸಿದರು. ಯಮುನಾ ಹಾಗೂ ಅನಿತಾ ಗೌರಿ ಕಾರ್ಯಕ್ರಮ ನಿರೂಪಿಸಿದರು.