Published On: Tue, Aug 8th, 2023

ಕಲ್ಲಡ್ಕ : ಬಂಟರ ಸಂಘದ ಆಶ್ರಯದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ 

ಬಂಟ್ವಾಳ: ಕಲ್ಲಡ್ಕ ವಲಯ ಬಂಟರ ಸಂಘದ ಆಶ್ರಯದಲ್ಲಿ ಕಲ್ಲಡ್ಕ ಸಮೀಪದ ಪೂರ್ಲಿಪಾಡಿ ಮರಾಠಿ ಸಮಾಜ ಭವನ ದಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ ನಡೆಯಿತು.ತುಂಬೆ ಬಿ.ಎ. ಕಾಲೇಜಿನ ರಾಜ್ಯಶಾಸ್ತ್ರದ ಉಪನ್ಯಾಸಕರಾದ ದಿನೇಶ್ ಶೆಟ್ಟಿ ಅಳಿಕೆ ಉದ್ಘಾಟನೆಗೈದು ಆಟಿ ತಿಂಗಳ ವಿಶೇಷತೆ ಬಂಟ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಿದರು.ಮುಖ್ಯ ಅತಿಥಿಯಾಗಿದ್ದ ಹೇಮ ಜಯರಾಮ ರೈ ಅವರು ತಿಂಗಳ ವಿಶೇಷತೆ  ಮತ್ತು ಮಹಿಳಾ ಪ್ರಧಾನ ಬಂಟ ಸಮಾಜದ ಬಗ್ಗೆ ಮಾತನಾಡಿದರು.


ಕಲ್ಲಡ್ಕ ವಲಯ ಬಂಟರ ಸಂಘದ ಅಧ್ಯಕ್ಷರಾದ ಪದ್ಮನಾಭ ರೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಸಿದ್ದರು.ಮಾಜಿ ಸಚಿವರಾದ  ಬಿ.ರಮಾನಾಥ ರೈ, ಜಿಪಂ. ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ,ಉದ್ಯಮಿ ಸಚ್ಚಿದಾನಂದ ಶೆಟ್ಟಿ, ತಾಲೂಕು  ಬಂಟರ ಸಂಘದ ಖಜಾಂಚಿ  ಪ್ರತಿಭಾ ಏ ರೈ, ಬಂಟ್ವಾಳ ತಾಲೂಕು ಮಹಿಳಾ ವಿಭಾಗದ ಅಧ್ಯಕ್ಷರಾದ  ರಮಾ ಎಸ್ .ಭಂಡಾರಿ,ಯುವ ಬಂಟರ ಸಂಘದ ಅಧ್ಯಕ್ಷ ನಿಶಾನ್ ಆಳ್ವ ಬಿ.ಸಿ ರೋಡ್, ಮಹಿಳಾ ವಿಭಾಗದ ಕೋಶಾಧಿಕಾರಿ ಸುಜಾತ ಪಿ.ರೈ, ವಲಯ ಬಂಟರ ಸಂಘದ ಗೌರವಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಲಕೃಷ್ಣ ಆಳ್ವ, ವಲಯ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷರಾದ ನೀನಾ ರೈ, ಯುವ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಸಿನಾಜೆ  ಮತ್ತು ಗ್ರಾಮ ಸಮಿತಿಗಳ ಅಧ್ಯಕ್ಷರು ಉಪಸ್ಥಿತರಿದ್ದರು.


ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಹಾಗೂ 2022- 23ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕವನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ಸಂಘದ ಪ್ರಧಾನ ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೋಳ್ತಮಜಲು  ವರದಿಯನ್ನು ವಾಚಿಸಿದರು ನಾಗೇಶ್ ಶೆಟ್ಟಿ ಬೊಂಡಾಲ ಅಂತರ ಗುತ್ತು ಮತ್ತು ಸುನಾದ್ ರಾಜ್ ಶೆಟ್ಟಿಯವರು ಕಾರ್ಯಕ್ರಮವನ್ನು ನಿರೂಪಿಸಿದರು.ಸುರೇಶ್ ಶೆಟ್ಟಿ ಕಾಂದಿಲ ಸಹಕರಿಸಿದರು. ಆಟಿ ತಿಂಗಳ ವಿಶೇಷ ಖಾದ್ಯಗಳ ಜೊತೆಗೆ ಸಹಭೋಜನ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಹಾಗೂ  ಹಾಸ್ಯ ಕಲಾವಿದರಾದ ದೀಪಕ್ ರೈ ಪಾನಜೆ ಮತ್ತು ತಂಡದವರಿಂದ ಹಾಸ್ಯ ಕಾರ್ಯಕ್ರಮ ಜರುಗಿತು 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter