ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ ದಿಂದ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ
ಬಂಟ್ವಾಳ: ಸನಾತನ ಹಿಂದೂ ಜಾತ್ರೆ ವ್ಯಾಪಾರಸ್ಥರ ಸಂಘ (ರಿ.) ದ.ಕ ಇದರ ವತಿಯಿಂದ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ವಿತರಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಿ.ಸಿ.ರೊಡಿನ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ನಡೆಯಿತು.

ಶ್ರೀಕ್ಷೇತ್ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಕಾರ್ಯಕ್ರಮ ಉಧಘಾಟಿಸಿ ಆಶೀರ್ವಚನ ನೀಡಿದರು. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ವಹಿಸಿದ್ದರು. ವಿ.ಹಿಂ.ಪ.ನ ಮುಖಂಡ ಶರಣ್ ಪಂಪ್ ವೆಲ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ನ್ಯಾಯವಾದಿ ರಂಜಿತ್ ಮೈರಾ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಭಾಗವಹಿಸಿದ್ದರು.
ಜಯರಾಮ್ ಎನ್. ಶೆಟ್ಟಿಗಾರ್ ಸ್ವಾಗತಿಸಿದರು. ಸತೀಶ್ ಬಂಗೇರ ತುಂಬೆ ವಂದಿಸಿದರು. ಚೈತನ್ಯ ಕೂಟಾರಿ ಕಾರ್ಯಕ್ರಮ ನಿರೂಪಿಸಿದರು