ವಾಮದಪದವು ಸರ್ಕಾರಿ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ
ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ, ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸದ್ಭಾವನಾ ದಿನವನ್ನು ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ರಾಧಾಕೃಷ್ಣ ಹೆಚ್ ಬಿ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ ಸದ್ಭಾವನಾ ದಿನದ ಪ್ರಾಮುಖ್ಯತೆಯನ್ನು ತಿಳಿಸಿದರಲ್ಲದೆ ಜಾತಿ, ಮತ ಬೇಧವಿಲ್ಲದೆ ಸಾಮರಸ್ಯದ ಬದುಕನ್ನು ನಡೆಸುವಂತೆ ಕರೆ ನೀಡಿದರು.
ಗ್ರಂಥಪಾಲಕರಾದ ಹರ್ಷಿತಾ ಹಾಗೂ ಬೋಧಕೇತರ ಸಿಬ್ಬಂದಿಗಳಿದ್ದರುಪ್ರತಿಕ್ಷಾ ಸ್ವಾಗತಿಸಿದರು, ಕು. ಕುಶ್ನಿತಾ ವಂದಿಸಿದರು. ಕು. ಅಮೀಷಾ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು. ಕಾಲೇಜಿನ ಪ್ರಥಮ ಹಾಗೂ ದ್ವಿತೀಯ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.