ವಿಟ್ಲ: 1722 ನೇ ಮಧ್ಯವರ್ಜನ ಶಿಬಿರಕ್ಕೆ ಚಾಲನೆ
ಬಂಟ್ವಾಳ: ಮಧ್ಯವ್ಯಸನದಂತಹ ದುಶ್ಚಟವನ್ನು ಬಿಟ್ಟು ಹೊಸ ಜೀವನ ಕಟ್ಟಿಕೊಂಡು,ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಬಾಳುವಂತೆ ವಿಟ್ಲ ಜನ ಜಾಗೃತಿ ವೇದಿಕೆಯ ವಲಯ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ಅರಮನೆ ವಿಟ್ಲ ರವರು ಹೇಳಿದರು.

ವಿಟ್ಲ ಶಾಂತಿನಗರ ಅಕ್ಷಯ ಸಮುದಾಯ ಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ,ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು,ತಾಲೂಕು ಜನ ಜಾಗೃತಿ ವೇದಿಕೆ ಬಂಟ್ವಾಳ,ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ವಿಟ್ಲ,ಪಟ್ಟಣ ಪಂಚಾಯತ್ ವಿಟ್ಲ,ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ವಿಟ್ಲ,ಗೌಡರ ಯಾನೆ ಒಕ್ಕಲಿಗರ ಸಂಘ ಶಾಂತಿನಗರ ವಿಟ್ಲ,ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆ ದೇರಳಕಟ್ಟೆ,ರೋಟರಿ ಕ್ಲಬ್ ಬಂಟ್ವಾಳ,ನವಜೀವನ ಸಮಿತಿ ವಿಟ್ಲ,ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿ ಇದರ ವಿಸ್ತರಣಾ ಕಾರ್ಯಕ್ರಮದ ಪ್ರಯುಕ್ತ ನಡೆದ 1722 ನೇ ಮಧ್ಯವರ್ಜನ ಶಿಬಿರ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆಯ ದಕ್ಷಿಣ ಕನ್ನಡ ಎರಡರ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಮಾತನಾಡಿ ವ್ಯಸನ ಮುಕ್ತ ಸಮಾಜ ನಿರ್ಮಿಸುವ ಉದ್ದೇಶದಿಂದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಜನಜಾಗೃತಿ ವೇದಿಕೆಯ ಮೂಲಕ ಹಮ್ಮಿಕೊಂಡ ಮಧ್ಯವರ್ಜನ ಶಿಬಿರದ ಮೂಲಕ ಹೊಸ ಜೀವನ ನಡೆಸಲು ದಾರಿದೀಪವಾಗಿದೆ.ಶಿಬಿರಾರ್ಥಿಗಳನ್ನು ಮನಸ್ಸು ಪರಿವರ್ತನೆಗೊಳಿಸಿ ಕುಡಿತದ ಚಟವನ್ನು ಬಿಡಿಸಿ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನಾಗಿಸುವುದೇ ಇದರ ಉದ್ದೇಶ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಧ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಮೋನಪ್ಪ ಗೌಡ ವಹಿಸಿದ್ದರು.
ಪ್ರಗತಿ ಬಂದು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷ ನವೀನ್ ಚಂದ್ರ,ಡಾಕ್ಟರ್ ಮಂದಾರ ಜೈನ್, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ ಇಲ್ಲಿನ ಹಿರಿಯ ಆರೋಗ್ಯ ಸುರಾಕ್ಷಣಾಧಿಕಾರಿ ಕುಸುಮಾವತಿ,ರಾಧಾಕೃಷ್ಣ ಚಲ್ಲಡ್ಕ,ಬಂಟ್ಚಾಳ ರೋಟರಿ ಕ್ಲಬ್ ನ ಮಾಜಿ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ , ಮುಡಿಪು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಆಳ್ವ, ಪೆರ್ನೆ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರೋಹಿತಾಕ್ಷ, ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ವಿಟ್ಲ ವಲಯ ಅಧ್ಯಕ್ಷ, ಪ್ರಮೀಳಾ, ಅಳಿಕೆ ವಲಯ ಅಧ್ಯಕ್ಷ ರಾಜೇಂದ್ರ , ಕೇಪು ವಲಯ ಅಧ್ಯಕ್ಷೆ ಪುಷ್ಪಾಕರ್ ರೈ , ಮೊದಲಾದವರು ಉಪಸ್ಥಿತರಿದ್ದರು.
ವಿಟ್ಲ ತಾಲೂಕು ಯೋಜನಾಧಿಕಾರಿ ಚೆನ್ನಪ್ಪ ಗೌಡ ಸ್ವಾಗತಿಸಿ, ಜನಜಾಗೃತಿ ವೇದಿಕೆ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪ್ರಸ್ತಾವನೆಗೈದರು, ಕೇಪು ವಲಯ ಮೇಲ್ವಿಚಾರಕ ಜಗದೀಶ್ ವಂದಿಸಿದರು. ಮುಡಿಪು ವಲಯ ಮೇಲ್ವಿಚಾರಕ ಗಂಗಾಧರ್ ಕಾರ್ಯಕ್ರಮ ನಿರೂಪಿಸಿದರು.