Published On: Thu, Sep 21st, 2023

ಐದು ದಿನಗಳ ಸಾರ್ವಜನಿಕ ಶ್ರೀಗಣೇಶೋತ್ಸವಕ್ಕೆ ಚಾಲನೆ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ ಜಕ್ರಿಬೆಟ್ಟುವಿನಲ್ಲಿ ಐದುದಿನಗಳ‌ ಕಾಲ ಆರಾಧಿಸಲ್ಪಡುವ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಮಂಗಳವಾರ ಚಾಲನೆ ನೀಡಲಾಯಿತು.

ಮಾಜಿ ಸಚಿವ ರಮಾನಾಥ ರೈ ಅವರು 20 ವರ್ಷದ ಶ್ರೀಗಣೇಶೋತ್ಸವದ ವಿವಿಧ ಕಾರ್ಯಕ್ರಮಗಳನ್ನು ದೀಪ ಬೆಳಗಿಸಿ‌ ಚಾಲನೆ ನೀಡಿದರು.
ಮಂಗಳೂರಿನ ಖ್ಯಾತ ವೈದ್ಯರಾದ ಡಾ.ಶಿವಪ್ರಸಾದ್,ಬಂಟ್ವಾಳ ತಾ.ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ,ಉದ್ಯಮಿ ಪಿಯೂಸ್ ಎಲ್.ರೋಡ್ರಿಗಸ್,ನಿವೃತ್ತ ಬ್ಯಾಂಕ್ ಉದ್ಯೋಗಿ‌ ಬೇಬಿಕುಂದರ್,ಪುರಸಭಾ ಸದಸ್ಯರಾದ ವಾಸುಪೂಜಾರಿ,ಲೋಲಾಕ್ಷ ಶೆಟ್ಟಿ,ಮಾಜಿ ಸದಸ್ಯರಾದ ಸದಾಶಿವ ಬಂಗೇರ,ಪ್ರವೀಣ್ ಬಿ.,ಮಾಜಿ ಜಿಪಂ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಶ್ರೀಗಣೇಶೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಪದ್ಮಶೇಖರ ಜೈನ್,ಪದಾಧಿಕಾರಿಗಳಾದ ಸುದೀಪ್ ಕುಮಾರ್ ಶೆಟ್ಟಿ, ಬಾಲಕೃಷ್ಣ ಮೊದಲಾದವರಿದ್ದರು.

ತದನಂತರ ಭಜನಾ ಸಂಕೀರ್ತನೆ ಹಾಗೂ ಸಂಜೆ‌ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter