Published On: Fri, Sep 22nd, 2023

ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ಸದಸ್ಯರಿಗೆ ಶೇ.14 ಡಿವಿಡೆಂಡ್ ಘೋಷಣೆ

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘ 2022-23ನೇ ಸಾಲಿನ ಆರ್ಥಿಕ ವರ್ಷದಲ್ಲಿ 218 ಕೋ.ರೂ.ವ್ಯವಹಾರ ನಡೆಸಿ ಒಟ್ಟು 60.20 ಲಕ್ಷ ರೂ.ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಕೆ. ಲಕ್ಷ್ಮೀ ನಾರಾಯಣ ಉಡುಪ ಅವರು ತಿಳಿಸಿದ್ದಾರೆ.
ಪುಂಜಾಲಕಟ್ಟೆಯಲ್ಲಿರುವ ಸಂಘದ ಕೇಂದ್ರ ಕಚೇರಿ ಸುಧನ್ವ ಇದರ ಸುವಿಧ ಸಹಕಾರಿ ಸಭಾ ಭವನದಲ್ಲಿ ಗುರುವಾರ ನಡೆದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು  ಸದಸ್ಯರಿಗೆ ಶೇ.14 ಡಿವಿಡೆಂಡ್ ನ್ನು ಘೋಷಿಸಿದರು.

ಸಂಘವು ಒಟ್ಟು 3462 ಸದಸ್ಯರನ್ನು  1.50 ಕೋ.ರೂ. ಪಾಲು ಬಂಡವಾಳವನ್ನು ಹೊಂದಿದೆ. ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 11.31 ಕೋ.ರೂ. ಸಾಲ ಪಡೆದಿದ್ದು,ಸದಸ್ಯರಿಗೆ 2907.85 ಕೋ.ರೂ. ಸಾಲ ವಿತರಿಸಲಾಗಿದೆ.ಪ್ರಸಕ್ತ ಸಾಲಿನಲ್ಲಿ ಶೇ.97.30 ಸಾಲ ವಸೂಲಾತಿ ಮಾಡಿ ದಾಖಲೆ ಸಾಧಿಸಿದ್ದು, ಲೆಕ್ಕ ಪರಿಶೋಧನೆಯಲ್ಲಿಯು  ‘ಎ’ ಶ್ರೇಣಿಯನ್ನು  ಪಡೆದಿದೆ ಎಂದು ಅವರು ಹೇಳಿದರು.

ಮುಂದಿನ ದಿನಗಳಲ್ಲಿ ಇರ್ವತ್ತೂರು ಶಾಖೆಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ  ಸಂಘದ ಅಭಿವೃದ್ಧಿಗೆ ವಿಶೇಷ ಪ್ರಯತ್ನ ನಡೆಸಲಾಗುವುದು ಎಂದ ಅವರು ಸಾಲ ವಸೂಲಾತಿ ಹಾಗೂ ಸಾಲ ಪಡೆಯುವಲ್ಲಿ ಸಹಕರಿಸಿದ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯ ವ್ಯಾಪ್ತಿಯ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ,ಅಂಗವಿಕಲರು, ಅನಾರೋಗ್ಯ ಪೀಡಿತರಿಗೆ ಸಹಾಯಧನ ವಿತರಿಸಲಾಯಿತು.
ಸಂಘದ ಉಪಾಧ್ಯಕ್ಷ ಉಮೇಶ್ ಪೂಜಾರಿ,ನಿರ್ದೇಶಕರಾದ ಬೂಬ ಸಪಲ್ಯ,ಸೀತಾರಾಮ ಶೆಟ್ಟಿ,ಸುಂದರ ನಾಯ್ಕ,ನಾರಾಯಣ ಪೂಜಾರಿ,ಚಂದ್ರ ಶೇಖರ ಹೆಗ್ಡೆ,ಸಂತೋಷ್ ಕುಮಾರ್ ಶೆಟ್ಟಿ,ಹರ್ಷಿಣಿ ಪುಷ್ಪಾನಂದ, ಪ್ರಭಾಕರ ಪಿ.ಎಂ.,ದಿನೇಶ್ ಮೂಲ್ಯ,ಶಿವಯ್ಯ ಪರವ ವೇದಿಕೆಯಲ್ಲಿದ್ದರು.

ಸಂಘದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಬಬಿತಾ ಡಿ. ಅವರು ವಾರ್ಷಿಕ ವರದಿ ಹಾಗೂ ಲೆಕ್ಕ ಪತ್ರಗಳನ್ನು ಸಭೆಗೆ ಮಂಡಿಸಿದರು.ಸಂಘದ ಸಿಬಂದಿ ವರ್ಗ ಸಹಕರಿಸಿದರು.ಸಭೆಯ ಆರಂಭಕ್ಕೆ ಮುನ್ನ ದ.ಕ.ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರದ ಉದ್ದಾರಕ್ಕಾಗಿ ಶ್ರಮಿಸಿದ ಸಹಕಾರಿ ದುರೀಣ ದಿ.ಮೊಳಹಳ್ಳಿ ಶಿವರಾಯ ಅವರ ಭಾವಚಿತ್ರಕ್ಕೆ ಪುಪ್ಪಾರ್ಚನೆಯ ಮೂಲಕ ಗೌರವಾರ್ಪಣೆ ಸಲ್ಲಿಸಲಾಯಿತು‌. 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter