ಬಂಟ್ವಾಳ ಎಸ್ .ವಿ.ಎಸ್. ಪ. ಪೂ. ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ದಿನಾಚರಣೆ
ಬಂಟ್ವಾಳ: ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕಗಳು ವಿದ್ಯಾರ್ಥಿಯಲ್ಲಿ ಅಡಗಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ವೇದಿಕೆಯನ್ನು ಒದಗಿಸಿಕೊಡುತ್ತದೆ ಎಂದು ಶ್ರೀ ವೆಂಕಟರಮಣ ಸ್ವಾಮೀ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಹರಿಪ್ರಸಾದ್ ಹೇಳಿದರು.
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಎನ್.ಸಿ.ಸಿ. ಘಟಕದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇಹ ಮನಸ್ಸು ಸ್ವಚ್ಚತೆ ವ್ಯಕ್ತಿಗೆ ಮಾನಸಿಕ ಸ್ಥೈರ್ಯ ತುಂಬಿ ಹೊಂದಾಣಿಕೆ ಮನೋಭಾವವನ್ನು ಬೆಳೆಸುತ್ತದೆ.ನಾಯಕತ್ವದ ಗುಣ,ಏಕತೆ, ರಾಷ್ಟ್ರೀಯ ಭಾವೈಕ್ಯತೆ ಮುಂತಾದ ಜೀವನ ಮೌಲ್ಯಗಳ ಜತೆ ಅರೋಗ್ಯದ ಕಡೆ ಹೆಚ್ಚಿನ ಒತ್ತು ಕೊಡಲು ಸಹಕಾರಿಯಾಗುತ್ತದೆ ಎಂದರು.
ಎಸ್.ವಿ.ಎಸ್. ಪ.ಪೂ. ಕಾಲೇಜಿನ ಉಪ ಪ್ರಾಂಶುಪಾಲ ಮತ್ತು ಎನ್.ಸಿ.ಸಿ ಅಧಿಕಾರಿ ಲೆಪ್ಟಿನೆಂಟ್ ಪ್ರದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶಶಿಧರ್ ಎಸ್. ಪ್ರಸ್ತಾವನೆಗೈದರು.ಎನ್.ಎಸ್.ಎಸ್. ಸ್ವಯಂ ಸೇವಕರು ಎನ್.ಎಸ್.ಎಸ್. ಗೀತೆಯನ್ನು ಹಾಡಿದರು. ಎನ್.ಎಸ್.ಎಸ್. ಸ್ವಯಂ ಸೇವಕಿ ಯಕ್ಷಿತಾ ಸ್ವಾಗತಿಸಿ,ಎನ್.ಎಸ್.ಎಸ್. ಸ್ವಯಂ ಸೇವಕಿ ಪ್ರಜ್ಞಾವಿ ವಂದಿಸಿದರು.ಎನ್.ಸಿ.ಸಿ ಕೆಡಿಟ್ ನಿಖಿತಾ ಕಾರ್ಯಕ್ರಮ ನಿರೂಪಿಸಿದರು.