ಬಂಟ್ವಾಳ: ಪಾಣೆ ಮಂಗಳೂರು ಶ್ರೀ ಭಯಂಕೇಶ್ವರ ದೇವಳದಲ್ಲಿ ಅ. 26ರಂದು ನಡೆಸಲು ಉದ್ದೇಶಿಸಿರುವ ಪ್ರಶ್ನಾ ಚಿಂತನೆ ಪೂರ್ವಭಾವಿ ಸಭೆಯು ಭಾನುವಾರ ಶ್ರೀ ಕ್ಷೇತ್ರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಘು ಸೋಮಯಾಜಿ ಅಧ್ಯಕ್ಷತೆಯಲ್ಲಿ ನಡೆಯಿತು.

ಅವರು ಮಾತಾಡಿ  ಕ್ಷೇತ್ರದ ತಂತ್ರಿ ಗಳಾದ ನಿಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ,ಪ್ರಸಿದ್ದ ದೈವಜ್ಞರಾದ ಬೇಲ ಪದ್ಮನಾಭ ಶರ್ಮ ಅವರು ಪ್ರಶ್ನಾ ಚಿಂತನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡುವರು ಎಂದು ತಿಳಿಸಿದರು.

ಪ್ರಶ್ನಾ ಚಿಂತನೆಗೆ ಧನಾತ್ಮಕವಾಗಿ ಸ್ಪಂದನೆ ನೀಡಿ ಅದರ ಸದುಪಯೋಗವನ್ನು ಕ್ಷೇತ್ರದ ಸಾನಿಧ್ಯ ಅಭಿವೃದ್ದಿಗಾಗಿ ಬಳಸಿಕೊಳ್ಳಬೇಕು ಎಂದರು. ಕ್ಷೇತ್ರಕ್ಕೆ ನಿತ್ಯವು ಭಕ್ತಾಧಿಗಳ ಸಂಪರ್ಕ ಹೆಚ್ಚಾಗಬೇಕು ಅದಕ್ಕಾಗಿ ಸೌಕರ್ಯ ಅಳವಡಿಸುವುದು,ನಿತ್ಯ ಭಜನಾ ಸಂಕೀರ್ತನೆ ನಡೆಸುವ ಬಗ್ಗೆ ತಿಳಿಸಿದರು.

ವೈದಿಕರಾದ ವೆಂಕಟರಮಣ ಮುಚ್ಚಿನ್ನಾಯ,ಕೇಶವ ಶಾಂತಿ,ಪ್ರಮುಖರಾದ ರಾಜಾ ಬಂಟ್ವಾಳ್,ಜಗನ್ನಾಥ ಬಂಗೇರ ನಿರ್ಮಾಲ್,ಸಮಿತಿ ಸದಸ್ಯ ಲೊಕೇಶ್ ನರಹರಿ ನಗರ ಅವರು  ಮಾತನಾಡಿದರು.

ಗುತ್ತು ಮನೆಯ ಕೇಶವ ಶೆಣೈ,ರವಿ ಶೆಣೈ,ಐದು ಮನೆ ಮುಖ್ಯಸ್ಥ ಹೊಸಲಚ್ಚಿಲು ಯತೀಶ್ ಶೆಟ್ಟಿ,ಕೆದ್ದೇಲು ರಂಜಿತ್,ಕೋಡಿ ಕೇಶವ ಪೂಜಾರಿ, ಪಲ್ಲತಿಲ ಜಯರಾಜ್,ನಿರ್ಮಾಲ್ ರಾಜೇಶ್,ಉದ್ಯಮಿ ನಾರಾಯಣ ಸೋಮಯಾಜಿ,ಗಣ್ಯರಾದ ರಘು ಸಪಲ್ಯ,ಪ್ರೇಮನಾಥ ಶೆಟ್ಟಿ,ವೇದವ ಗಾಣಿಗ,ಉಲ್ಲಾಸ್ ರೈ ಸೂರಿಕುಮೇರ್,ಪುರುಷೋತ್ತಮ ಬಂಗೇರ ನಾಟಿ ಮತ್ತು ಇತರ ನೇತಾರರು ಉಪಸ್ಥಿತರಿದ್ದರು.
ವ್ಯವಸ್ಥಾಪನಾ ಸಮಿತಿ ಕೃಷ್ಣಪ್ಪ ಗಾಣಿಗ ಸ್ವಾಗತಿಸಿ,ವಂದಿಸಿದರು.ಮೆನೇಜರ್ ನಾಗೇಂದ್ರ ರಾವ್ ಕಾರ್ಯಕ್ರಮ ನಿರೂಪಿಸಿದರು.

By suddi9

Leave a Reply

Your email address will not be published. Required fields are marked *