Published On: Sun, Oct 8th, 2023

ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾರಿಗೆ ಅಭಿನಂದನಾ ಕಾರ್ಯಕ್ರಮ

ಬಂಟ್ವಾಳ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತಾಲೂಕು ಒಕ್ಕೂಟ ಸಮಿತಿ ಬಂಟ್ವಾಳ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ರವರ ೭೫ನೇ ಹುಟ್ಟು ಹಬ್ಬ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮವು ಬಿ.ಸಿ.ರೋಡ್ ನ ರೋಟರಿ ಕ್ಲಬ್ ಸಭಾಂಗಣದಲ್ಲಿ ಜರಗಿತು.

ಒಕ್ಕೂಟದ ಅಧ್ಯಕ್ಷರು,ಮಾಜಿ ರೋಟರಿ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಅಧ್ಯಕ್ಷತೆಯನ್ನು ವಹಿಸಿದ್ದರು.ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್,ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ್ ಭಟ್,ಬಂಟ್ವಾಳ ರೋಟರಿ ಕ್ಲಬ್ ನ ಅಧ್ಯಕ್ಷ ಪ್ರಕಾಶ್ ಬಾಳಿಗಾ,ಕಾರ್ಯದರ್ಶಿ ಸದಾಶಿವ ಬಾಳಿಗಾ,ಒಕ್ಕೂಟದ ಉಪಾಧ್ಯಕ್ಷ ಜೆ.ಪ್ರಹ್ಲಾದ್ ಶೆಟ್ಟಿ,ಸಂಘಟಕ ಜಗನ್ನಾಥ್ ಚೌಟ ಬದಿಗುಡ್ಡೆ,ಶಿಕ್ಷಣ ಸಂಯೋಜಕ  ಸುಜಾತ,ಸುಧಾ,ಒಕ್ಕೂಟದ ಖಜಾಂಚಿ ಇಬ್ರಾಹಿಂ ಉಪಸ್ಥಿತರಿದ್ದರು.

ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಯಂತ್ ನಾಯಕ್ ವಂದಿಸಿ,ಒಕ್ಕೂಟದ ಉಪಾಧ್ಯಕ್ಷ ಬಿ.ಎಂ.ತುಂಬೆ ಕಾರ್ಯಕ್ರಮ ನಿರೂಪಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter