Published On: Thu, Oct 12th, 2023

“ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕ ಪ್ರಥಮ,ಜಿಲ್ಲಾ ಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿಗೂ ಆಯ್ಕೆ

ಬಂಟ್ವಾಳ: ಚಿತ್ರದುರ್ಗ ಜಿಲ್ಲೆಯ  ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ‌ ಸ್ಪರ್ಧೆಯಲ್ಲಿ ಮೌನೇಶ ವಿಶ್ವಕರ್ಮ ರವರ ರಚಿಸಿದ “ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕ ಪ್ರಥಮ ಸ್ಥಾನಗಳಿಸಿದ್ದು,ಜಿಲ್ಲಾ ಮಟ್ಟದ ಅತ್ಯುತ್ತಮ ಕೃತಿ ಪ್ರಶಸ್ತಿಗೂ ಆಯ್ಕೆಯಾಗಿದೆ.

ಚಿತ್ರದುರ್ಗ ತಾಲೂಕು ಮಟ್ಟ ಹಾಗೂ ಚಿತ್ರದುರ್ಗ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ  ಚವಲಿ ಹಟ್ಟಿಯ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢ ಶಾಲೆಯ ಮಕ್ಕಳು  “ತಂತ್ರಜ್ಞಾನದ ಮಾಯೆ” ವಿಜ್ಞಾನ ನಾಟಕವನ್ನು ಅಭಿನಯಿಸಿ ಪ್ರಥಮ ಸ್ಥಾನಗಳಿಸಿ,ಬೆಂಗಳೂರು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. 

ಈ ನಾಟಕವನ್ನು ಶಾಲೆಯ ವಿಜ್ಞಾನ ಶಿಕ್ಷಕ ಸಿ.ಜಿ.ಹಾಲೇಶ್ ರವರು‌ ನಿರ್ದೇಶಿಸಿದ್ದು,ಉತ್ತಮ ನಿರ್ದೇಶನ,ಉತ್ತಮ‌ ನಟನೆ ಪ್ರಶಸ್ತಿಗೂ ಗೊಲ್ಲರಹಟ್ಟಿ ಶಾಲೆಯ ಮಕ್ಕಳ ತಂಡ ಆಯ್ಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ನಡೆದ ವಿಜ್ಞಾನ ನಾಟಕ ಸ್ಪರ್ಧೆಗೆ ಮೌನೇಶ ವಿಶ್ವಕರ್ಮರವರು ಐದು ನಾಟಕಗಳನ್ನು ನಿರ್ದೇಶಿಸಿದ್ದರು. ಪುತ್ತೂರಿನಲ್ಲಿ ಸುದಾನ ವಸತಿ ಶಾಲೆ ಯಲ್ಲಿ ‘ರೋಗಗಳ ಮಾಯದಾಟ’,ಸವಣೂರು ಸರ್ಕಾರಿ ಪ್ರೌಢಶಾಲೆಯಲ್ಲಿ ‘ಸಿರಿಧಾನ್ಯ ಮಹಾತ್ಮೆ’ ಹಾಗೂ ಪೆರಿಯಡ್ಕದ‌ ಸರ್ವೋದಯ ಅನುದಾನಿತ ಪ್ರೌಢಶಾಲೆಯಲ್ಲಿ ‘ಡಿಜಿಟಲ್ ಮಾಯೆ’,ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯಲ್ಲಿ ‘ಆರೋಗ್ಯ ಸಿರಿ’,ಸುಳ್ಯ ತಾಲೂಕಿನ ಎಣ್ಮೂರು ಸರ್ಕಾರಿ ಪ್ರೌಢ ಶಾಲೆಯ ಮಕ್ಕಳಿಗೆ ‘ಅಜ್ಞಾನದಿಂದ ವಿಜ್ಞಾನದೆಡೆಗೆ’ ಎನ್ನುವ ನಾಟಕಗಳನ್ನು ನಿರ್ದೇಶಿಸಿದ್ದು,ರಂಗಾಯಣ ಪದವೀಧರ ರಾಕೇಶ್ ಆಚಾರ್ಯ ನಿರ್ದೇಶನದಲ್ಲಿ ಸಹಕರಿಸಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter