ದ.ಕ. ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಮತ್ತು ಕಾರ್ಯಾಗಾರ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆ ಯ ವತಿಯಿಂದ ಉಚಿತ ಕೃಷಿ ಮಾಹಿತಿ ಕಾರ್ಯಾಗಾರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಶೇರು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಗುರುವಾರ ಬಿ.ಸಿ.ರೋಡಿನ ಗೀತಾಂಜಲಿ ಸಭಾಭವನದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಿ, ಮಾತನಾಡಿ,ರೈತರು ಇಂತಹ ಕಾರ್ಯಾಗಾರವನ್ನು ಸದುಪಯೋಗ ಪಡೆಯಬೇಕು ಎಂದರು.
ಬಂಟ್ವಾಳ ತೋಟಗಾರಿಕೆಯ ಹಿರಿಯ ಸಹಾಯಕ ನಿರ್ದೇಶಕ ಪ್ರದೀಪ್ ಡಿ’ಸೋಜ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ,ಕಲ್ಪವೃಕ್ಷವನ್ನು ಜನತೆ ದೇವತಾ ಮನೋಭಾವದಿಂದ ಕಾಣುತ್ತಿದ್ದು,ದ.ಕ.ಜಿಲ್ಲೆಯಲ್ಲಿ 35 ಸಾವಿರ ಹೆಕ್ಟರ್ ಭೂಮಿಯಲ್ಲಿ ತೆಂಗು ಬೆಳೆಸಲಾಗುತ್ತಿದ್ದು,ಅಡಕೆಯ ಬಳಿಕ ಜಿಲ್ಲೆಯ ಎರಡನೇ ಮುಖ್ಯ ಬೆಳೆಯಾಗಿದೆ ಎಂದರು.

ತೆಂಗು ರೈತರ ಕಂಪನಿ ನಿರ್ಮಾಣಕ್ಕೆ ಸರಕಾರವು ಪ್ರೋತ್ಸಾಹ ನೀಡುತ್ತಿದ್ದು,ಅತಿ ಸಣ್ಣ ರೈತರಿಗೆ ಪೂರಕವಾದ ವಾತಾವರಣ ನಿರ್ಮಾಣವಾಗುತ್ತದೆ.ತೋಟಗಾರಿಕೆ ಮತ್ತು ಕೃಷಿ ಇಲಾಖೆಯಿಂದಲೂ ಕಂಪನಿ ಸ್ಥಾಪನೆ ನಿರ್ಮಾಣ ಮಾಡಿದೆ.ಬಹುವಾರ್ಷಿಕ ಬೆಳೆಗಳನ್ನು ಬೆಳೆಯುವಾಗ ಅದರ ಮೂಲ ಶೋಧನೆ ಅಗತ್ಯ ಎಂದ ಅವರು ಪ್ರತಿಯೊಂದು ಗಿಡಕ್ಕೂ ಎಂಟು ಮೀಟರ್ ಅಂತರ ಇರಲಿ.ಸ್ಥಳೀಯವಾದ ತಳಿಗಳನ್ನು ನಾಟಿ ಮಾಡುವುದರಿಂದ ಉತ್ತಮ ಫಸಲನ್ನು ಪಡೆಯಲು ಸಾಧ್ಯ ಎಂದರು.
ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಸಂಸ್ಥೆಯ ಅಧ್ಯಕ್ಷ ಕುಸುಮಾಧರ್ ಎಸ್.ಕೆ.ಅಧ್ಯಕ್ಷತೆ ವಹಿಸಿದ್ದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮನಾಥ ಶೆಟ್ಟಿ ಬಾಳ್ತಿಲ,ಸಂಸ್ಥೆಯ ನಿರ್ದೇಶಕಿ ಲತಾ ವೇದಿಕೆಯಲ್ಲಿದ್ದರು.
ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕುಮಾರ್ ಪ್ರಸ್ತಾವನೆಗೈದು ಸಂಸ್ಥೆಯ ಉದ್ದೇಶಗಳನ್ನು ವಿವರಿಸಿದರು.
ನವ್ಯಶ್ರಿ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಬಂಟ್ವಾಳ ತಾಲೂಕು ಘಟಕದ ಸದಸ್ಯರಿಗೆ ಶೇರು ಪ್ರಮಾಣ ಪತ್ರವನ್ನು ವಿತರಿಸಲಾಯಿತು.