Published On: Fri, Oct 20th, 2023

ʼಸಾಹಿತ್ಯ ತಾರೆʼ ಮತ್ತು ʼಬಾಲಬಂಧುʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಂಟ್ವಾಳ: “ಮಕ್ಕಳ ಕಲಾಲೋಕ” ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕ ಇದು ನಿರ್ವಹಿಸುವ 17ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು 2023ರ ಡಿಸೆಂಬರ್ ಮೊದಲ ವಾರದಲ್ಲಿ ಕಡೇಶಿವಾಲಯ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಗುವುದು ಎಂದು ಸಮ್ಮೇಳನದ ಪೂರ್ವಭಾವಿ ಚಿಂತನಾ ಸಭೆಯಲ್ಲಿ ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ಹರಿಶ್ಚಂದ್ರ ಎಂ. ತಿಳಿಸಿದ್ದಾರೆ.

ತಾಲೂಕಿನಲ್ಲಿ 18 ವರ್ಷ ಪ್ರಾಯದೊಳಗಿನ ಮಕ್ಕಳಿರುವ ಸರಕಾರಿ, ಅನುದಾನಿತ, ಅನುದಾನ ರಹಿತ ವಿದ್ಯಾಸಂಸ್ಥೆಗಳಲ್ಲಿ ಐದು ವರ್ಷಗಳ ಈಚೆಗೆ ಸಾಹಿತ್ಯ ಹಾಗೂ ಇತರ ಕಲೆಗಳಲ್ಲಿ ಮಾಡಿದ ಸಾಧನೆಗಳ ವಿವರಗಳನ್ನು ಬರೆದು ಕಳುಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಿರುವ‌ ಅವರು ಆಯ್ದ ಒಂದು ವಿದ್ಯಾಸಂಸ್ಥೆಗೆ “ಸಾಹಿತ್ಯ ತಾರೆ” ಪ್ರಶಸ್ತಿಯನ್ನು ನೀಡಲಾಗುವುದು‌ ಎಂದು ತಿಳಿಸಿದ್ದಾರೆ.

ಮಕ್ಕಳಿಗಾಗಿ ಸಾಹಿತ್ಯ ಹಾಗೂ ವಿವಿಧ ಕಲೆಗಳಲ್ಲಿ ಸಹಕರಿಸುತ್ತಿರುವ ಶಿಕ್ಷಕರು ಅಥವಾ ಸಾರ್ವಜನಿಕ ಕಲಾಗಾರರ ಸಾಧನೆಗಳ ವಿವರಗಳನ್ನು ಕಳುಹಿಸುವಂತೆಯು ತಿಳಿಸಿರುವ ಅವರು ಆಯ್ದ ಸಾಧಕರೊಬ್ಬರಿಗೆ “ಬಾಲ ಬಂಧು” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಎರಡೂ ವಿವರಗಳನ್ನು 2023 ಅಕ್ಟೋಬರ್ 25ರೊಳಗೆ ಅಧ್ಯಕ್ಷರು, “ಮಕ್ಕಳ ಕಲಾ ಲೋಕ”  -ಸ್ಕಂದ-  ಅಳಕೆಮಜಲು 574243. ಮೊ: 9448626093 ಈ  ವಿಳಾಸಕ್ಕೆ ತಲುಪಿಸಬೇಕೆಂದು “ಮಕ್ಕಳ ಕಲಾ ಲೋಕ”ದ ಅಧ್ಯಕ್ಷ ರಮೇಶ ಎಂ. ಬಾಯಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter