Published On: Sun, Oct 29th, 2023

ವಾಲ್ಮೀಕಿ ರಚಿಸಿದ ರಾಮಾಯಣದಿಂದ ಜಗತ್ತಿಗೆ ಉತ್ತಮ ಸಂದೇಶ: ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಆಡಳಿತ ತಾಲೂಕು ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದೊಂದಿಗೆ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು.

ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಜಗತ್ತಿಗೆ ಉತ್ತಮ ಸಂದೇಶ ನೀಡುವ ರಾಮಾಯಣವನ್ನು ರಚಿಸಿದ ವಾಲ್ಮೀಕಿ ಮಹರ್ಷಿ, ರತ್ನಾಕರನಿಂದ ವಾಲ್ಮೀಕಿಯಾದ ಬಗೆಯನ್ನು ತಿಳಿಸಿ, ಜಗತ್ತಿನ ಆದಿಕವಿ ಎನಿಸಿಕೊಂಡಿದ್ದಾರೆ ಎಂದರು.

ಉಪನ್ಯಾಸ ನೀಡಿದ ತುಂಬೆ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ದಿನೇಶ್ ಶೆಟ್ಟಿ ಮಾತನಾಡಿ, ಕರ್ನಾಟಕದಲ್ಲಿ ಇವತ್ತು ವಾಲ್ಮೀಕಿಯನ್ನು ಆರಾಧಿಸುವುದರ ಜೊತೆಗೆ ರಾಮನ ಉಪಾಸನೆಯನ್ನು ಮಾಡುತ್ತಾರೆ. ವ್ಯಾಧ ಕುಲಕ್ಕೆ ಸೇರಿದ ಮಹಾನ್ ವ್ಯಕ್ತಿಗಳು ಪುರಾಣ ಮತ್ತು ಇತಿಹಾಸದಲ್ಲಿ ಆದರ್ಶಪ್ರಾಯವಾಗಿ ಮೆರೆದಿದ್ದಾರೆ ಎಂದರು. 

ಬಂಟ್ವಾಳ ತಹಶೀಲ್ದಾರ್ ಎಸ್.ಬಿ.ಕೂಡಲಗಿ ವಾಲ್ಮೀಕಿ ಮಹರ್ಷಿ ಕುರಿತು ಮಾತನಾಡಿದರು.

ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುನೀತಾ ಕುಮಾರಿ, ತಾ.ಪಂ ಸಹಾಯಕ ನಿರ್ದೇಶಕ ದಿನೇಶ್ ಉಪಸ್ಥಿತರಿದ್ದರು. ಪ್ರದೀಪ್ ಎನ್. ಕಾರ್ಯಕ್ರಮ ನಿರ್ವಹಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter