ಬೆಂಗಳೂರು: ಸರಕಾರಿ ಶಾಲಾ ಮಕ್ಕಳಿಗೆ ಪಾದರಕ್ಷೆ ನೀಡುವ ಬಗ್ಗೆ ಮುಂದಿನ ಆಯವ್ಯಯದಲ್ಲಿ ಸಾಧಕ ಬಾಧಕಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಧುಗಿರಿ ತಾಲೂಕು ಮಿಡಿಗೇಶಿ ಸರಕಾರಿ ಜೂನಿಯರ್ ಕಾಲೇಜ್ ಮೈದಾನದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಗುರುವಾರ ಶಂಕುಸ್ಥಾಪನೆ ನೆರವೇರಿಸಿ, ಶಾಸಕ ಕೆ.ಎನ್. ರಾಜಣ್ಣ ಅವರ ಮನವಿಯಂತೆ ಸರಕಾರಿ ಶಾಲೆ ಮಕ್ಕಳಿಗೆ ಪಾದರಕ್ಷೆ ನೀಡುವ ಕುರಿತು ಪರಿಶೀಲಿಸಲಾಗುವುದು. ಅಂಗನವಾಡಿ ಮಕ್ಕಳಿಗೆ ವಾರದ 5 ದಿನ ಕ್ಷೀರ ಭಾಗ್ಯ ಯೋಜನೆ ವಿಸ್ತರಿಸುವ ಕುರಿತು ಚಿಂತನೆ ನಡೆದಿದೆ ಎಂದರು.

