ಸುದ್ದಿ9 ಬಂಟ್ವಾಳ: ಸಿದ್ಧಕಟ್ಟೆ-ಕರ್ಪೆ ಜಿಲ್ಲಾ ಪಂಚಾಯತ್ ರಸ್ತೆಯನ್ನು ಮರುಡಾಮರೀಕರಣ ಮಾಡಲು ಆಗ್ರಹಿಸಿ ಕರ್ಪೆ ಸಂಪರ್ಕ ರಸ್ತೆ ಹೋರಾಟ ಸಮಿತಿ ಮತ್ತು ವಿವಿಧ ಸಂಘಟನೆಗಳು ರಸ್ತೆ ಮಧ್ಯೆ ಗಂಜಿ ಬೇಯಿಸಿ ಊಟ ಮಾಡುವ ಮೂಲಕ ಮಂಗಳವಾರ ವಿಶಿಷ್ಠ ಪ್ರತಿಭಟನೆ ನಡೆಸಿದರು.
ಈ ರಸ್ತೆಯ ದುರಸ್ತಿ ಕಾರ್ಯ ನಡೆದು ಹಲವು ವರ್ಷಗಳೇ ಕಳೆದಿವೆ. ಸದ್ಯ ಹದಗೆಟ್ಟಿರುವ ರಸ್ತೆಯನ್ನು ದುರಸ್ತಿ ಪಡಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿಲ್ಲ ಹಾಗಾಗಿ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ಪ್ರತಿಭಟನೆಯ ನೇತೃತ್ವವಹಿಸಿದ್ದ ಸಮಿತಿಯ ಸದಸ್ಯರು ತಿಳಿಸಿದರು. ಮೂಡಬಿದ್ರೆ-ಬಿ.ಸಿ ರೋಡ್ ರಸ್ತೆಯಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ರಸ್ತೆಗೆ ಅಡ್ಡಲಾಗಿ ಮಲಗಿ ರಸ್ತೆ ತಡೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವಂತೆ ಪಟ್ಟುಹಿಡಿದರು. ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯ್ಕ್ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಸುಲೋಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.

