ಪರಂಗಿಪೇಟೆ: ನೂತನ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯ ಧನದ ಮಂಜೂರಾತಿ ಪತ್ರ ಹಸ್ತಾಂತರ
ಬಂಟ್ವಾಳ: ಬಂಟ್ವಾಳ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆ ತುಂಬೆ ವಲಯ ವ್ಯಾಪ್ತಿಗೊಳಪಟ್ಟ ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದ ನೂತನ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 3 ಲಕ್ಷ ರೂ. ಮಂಜೂರಾತಿ ಪತ್ರವನ್ನು ಪ್ರತಿಷ್ಠಾನಕ್ಕೆ ಹಸ್ತಾಂತರಿಸಲಾಯಿತು.

ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ರವರು ಪರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನಕ್ಕೆ ಭೇಟಿ ನೀಡಿ ಸೇವಾಂಜಲಿಯ ಟ್ರಸ್ಟಿ ಕೃಷ್ಣಕುಮಾರ್ ಪೂಂಜರವರಿಗೆ ಮಂಜೂರಾತಿ ಪತ್ರ ಹಸ್ತಾಂತರಿಸಿ, ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಾದ ಔಷಧಿ ದಾನ, ವಿದ್ಯಾ ದಾನ, ರಾಷ್ಟ್ರೀಯ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಅನುಷ್ಠಾನ, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳುವ ರೀತಿಯನ್ನು ಅಭಿನಂದಿಸಿದರು.

ಈ ಸಂದರ್ಭ ಗ್ರಾಮಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಮಾಧವ ಗೌಡ, ಕೇಂದ್ರ ಕಚೇರಿಯ ಸಮುದಾಯ ಅಭಿವೃದ್ಧಿ ವಿಭಾಗದ ಯೋಜನಾಧಿಕಾರಿ ಪುಷ್ಪರಾಜ್, ವಲಯದ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಸದಾನಂದ ಆಳ್ವ ಕಂಪ, ತುಂಬೆ ವಲಯ ಮೇಲ್ವಿಚಾರಕಿ ಮಮತಾ, ಸುಜೀರ್ ಮತ್ತು ಪರಂಗಿಪೇಟೆ ಸೇವಾ ಪ್ರತಿನಿಧಿಗಳಾದ ಮಲ್ಲಿಕಾ ಮತ್ತು ಅಮಿತಾ, ಪರಂಗಿಪೇಟೆ ವಿ ಎಲ್ ಈ ಸವಿತಾ, ಪರಂಗಿಪೇಟೆ ಒಕ್ಕೂಟದ ಅಧ್ಯಕ್ಷ ಸುಕೇಶ್ ಶೆಟ್ಟಿ, ತುಂಬೆ ವಲಯ ಅಧ್ಯಕ್ಷ ಲೀಡಿಯಾ ಪಿಂಟೋ, ಪದಾಧಿಕಾರಿಗಳಾದ ಮನೋಹರ ನಾಯ್ಕ್, ಸಂದೀಪ್ ಸುಜೀರ್, ಚಂದ್ರಹಾಸ ತುಂಬೆ ಹಾಗೂ ಸೇವಾಂಜಲಿ ಟ್ರಸ್ಟಿಯ ಸದಸ್ಯರುಗಳಾದ ಭಾಸ್ಕರ ಚೌಟ, ನಾರಾಯಣ, ಸುಕುಮಾರ್ ಸಿ ಡಿ ಮೆಡಿಕಲ್, ಪ್ರಶಾಂತ್ ತುಂಬೆ, ಜಯರಾಮ್ ಅರ್ಕುಳ, ಶಿವರಾಜ್ ಸುಜೀರ್, ಕೇಶವ ದೋಟ, ಪದ್ಮನಾಭ ಕಿದೆ ಬೆಟ್ಟು, ಪ್ರಕಾಶ್ ಕಿದೆ ಬೆಟ್ಟು, ಗಿರೀಶ್ ಪದೇಂಜರ್ ಮೊದಲಾದವರು ಉಪಸ್ಥಿತರಿದ್ದರು.