Published On: Mon, Dec 4th, 2023

 ಫರಂಗಿಪೇಟೆ ಸೇವಾಂಜಲಿಯಲ್ಲಿ 124 ನೇ ರಕ್ತದಾನ ಶಿಬಿರ

ಬಂಟ್ವಾಳ: ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೆಎಂಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ  ೧೨೪ನೇ ರಕ್ತದಾನ ಶಿಬಿರ ಫರಂಗಿಪೇಟೆಯ ಸೇವಾಂಜಲಿ ಸಭಾಗ್ರಹದಲ್ಲಿ ಭಾನುವಾರ ನಡೆಯಿತು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ಶಿಬಿರ ಉದ್ಘಾಟಿಸಿದರು. ಅವರು ಮಾತನಾಡಿ ರಕ್ತದಾನ ಅತ್ಯಂತ ಪುಣ್ಯದ ಕೆಲಸ. ರಕ್ತದಾನ ಮಾಡುವುದರಿಂದ ನಮ್ಮ ಆರೋಗ್ಯವು ಉತ್ತಮವಾಗುವುದರ ಜೊತೆಗೆ ಇನ್ನೊಬ್ಬರ ಪ್ರಾಣ ಉಳಿಸಲು ಸಾಧ್ಯವಿದೆ ಎಂದರು.

ಸೇವಾಂಜಲಿ ಪ್ರತಿಷ್ಠಾನ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಅವರು ಸೇವೆಯೇ ತನ್ನ ಗುರಿ ಎನ್ನುವ ಉದ್ದೇಶದೊಂದಿಗೆ ನಿರಂತರವಾಗಿ ಇಂತಹ ಸೇವಾ ಕೆಲಸಗಳನ್ನು ನಡೆಸಿಕೊಂಡು ಬರುತ್ತಿರುವುದು ಅಭಿನಂದನೀಯ ಎಂದರು.

ಪೊಲೀಸ್ ಸಿಬ್ಬಂದಿ ಪ್ರಮೋದ್ ದೇವಾಡಿಗ, ಸುಕೇಶ್ ಶೆಟ್ಟಿ ತೇವು ಮೊದಲಾದ ಪ್ರಮುಖರು ರಕ್ತದಾನ ಮಾಡಿದರು. ಈ ಸಂದರ್ಭ  ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣಕುಮಾರ್ ಪೂಂಜ, ಪ್ರಮುಖರಾದ ನಾರಾಯಣ ಬಡ್ಡೂರು, ಕೆಎಂಸಿ ಆಸ್ಪತ್ರೆಯ ವೈದ್ಯೆ ಡಾ. ಅಧಿತಿ. ಬ್ಲಡ್ ಬ್ಯಾಂಕಿನ  ಸೆಲಿನ್ ಜೋಸೆಫ್, ಅರ್ಜುನ್ ಪೂಂಜ, ಮೋಹನ್, ಸತ್ಯರಾಜ್ ಶೆಟ್ಟಿ, ರಾಜೇಶ್ ಕುಲಾಲ್ ತುಂಬೆ, ಶ್ರೀನಿವಾಸ ಕಾಲೇಜಿನ ಪ್ರಾಧ್ಯಪಕ ಜಯರಾಂ ತುಂಬೆ ಮೊದಲಾದವರು ಉಪಸ್ಥಿತರಿದ್ದರು. ಶಿಬಿರದಲ್ಲಿ ಒಟ್ಟು 61 ಯುನಿಟ್ ರಕ್ತ ಸಂಗ್ರಹವಾಯಿತು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter