Published On: Tue, Dec 12th, 2023

ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಪ್ರಥಮ‌

ಬಂಟ್ವಾಳ: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಗಣಿತ ಮೇಳದಲ್ಲಿ “ಸಮ ಬಹು ಭುಜಾಕೃತಿಗಳ ಗುಣ ಧರ್ಮಗಳ ಆಧಾರಿತ ಪ್ರದರ್ಶನ” ಎಂಬ ಗಣಿತ ಮಾದರಿ ಪ್ರದರ್ಶನದಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ೬ನೇ ತರಗತಿಯ ಭೂಮಿಕಾ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

ಇವರು ಕುರ್ಮಾನ್ ನಿವಾಸಿ ಮೋಹನ್ ಭಂಡಾರಿ ಹಾಗೂ ಇಂದಿರಾ ದಂಪತಿಯ ಪುತ್ರಿ. 

ಮೊದಲ ಬಾರಿಗೆ ಗಣಿತ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಇವರಿಗೆ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು, ಸಂಚಾಲಕರು, ಮುಖ್ಯೋಪಾಧ್ಯಾಯರು, ಬೋಧಕ ಹಾಗೂ ಬೋಧಕೇತರರು ಅಭಿನಂಧಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter