Published On: Sat, Dec 16th, 2023

ಬಂಟ್ವಾಳ: ಕುಲಾಲ ಸುಧಾರಕ ಸಂಘದ ಕಲಾವಳಿ-೨೦೨೪ ಲಾಂಛನ ಬಿಡುಗಡೆ

ಬಂಟ್ವಾಳ: ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘದ ಆಶ್ರಯದಲ್ಲಿ ನಡೆಯಲಿರುವ ಕಲಾವಳಿ-೨೦೨೪ ಕಾರ್ಯಕ್ರಮದ ಲಾಂಛನ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ವಾರ್ಷಿಕ ಮಹಾ ಸಭೆ ಕಾರ್ಯಕ್ರಮದಲ್ಲಿ ನಡೆಯಿತು.

ಜಿಲ್ಲಾ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಮತ್ತು ಜಿಲ್ಲಾ ಸಂಘದ ಪದಾಧಿಕಾರಿಗಳು ಲಾಛಂನ ಬಿಡುಗಡೆಗೊಳಿಸಿದರು. ಬಂಟ್ವಾಳ ಕುಲಾಲ ಸುಧಾರಕ ಸಂಘದ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ, ಉಪಾಧ್ಯಕ್ಷ ಸುಕುಮಾರ್ ಬಂಟ್ವಾಳ, ಕೋಶಾಧಿಕಾರಿ ರಮೇಶ್ ಸಾಲಿಯಾನ್, ಸಮಿತಿ ಸದಸ್ಯರಾದ ಮಚ್ಚೇಂದ್ರ ಸಾಲಿಯಾನ್, ಸುರೇಶ್ ಕುಲಾಲ್, ರಮೇಶ್ ಸಾಲಿಯಾನ್ ಸಂಚಯಗಿರಿ, ನಾರಾಯಣ ಸಿ.ಪೆರ್ನೆ, ಆಶಾ, ಜಲಜಾಕ್ಷಿ ಕುಲಾಲ್ ಹಾಗೂ ಜಿಲ್ಲೆಯ ಪ್ರಮುಖ ಕುಲಾಲ ಸಂಘದ ಅಧ್ಯಕ್ಷರುಗಳು, ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter