ಬಂಟ್ವಾಳ; ದ.ಕ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ಮಂಗಳೂರು ಇದರ ಬಿ.ಸಿ.ರೋಡು ಘಟಕವು ಶನಿವಾರ ಬಿ.ಸಿ.ರೋಡಿನ ತಾಲೂಕು ಕಚೇರಿ ಮುಂಭಾಗದಲ್ಲಿ ಶುಭಾರಂಭಗೊಂಡಿತು. ಬಂಟ್ವಾಳ ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ ಹಾಪ್ ಕಾಮ್ಸ್ ಮಳಿಗೆಯನ್ನು ಉದ್ಘಾಟಿಸಿದರು. ಜಿಲ್ಲಾಪಂಚಾಯತ್ ಮಾಜಿ ಉಪಾಧ್ಯಕ್ಷ ತುಂಗಪ್ಪ ಬಂಗೇರ, ಸಹಾಯಕ ತೋಟಗಾರಿಕಾ ನಿದರ್ೇಶಕ ಸಂಜೀವ ನಾಯ್ಕ್, ದ.ಕ.ಜಿಲ್ಲಾ ಕೃಷಿ ಅಭಿವೃದ್ದಿ ಸಹಕಾರಿ ಸಂಘದ ಅಧ್ಯಕ್ಷರಾದ ರವೀಂದ್ರ ಕಂಬಳಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಹಾಪ್ ಕಾಮ್ಸ್ ನಿದರ್ೇಶಕರಾದ ದಾಮೋದರ ಆಚಾರ್ಯ, ವಿಜಯ ರೈ ಉಪಸ್ಥಿತರಿದ್ದರು. ಮಂಗಳೂರು ಹಾಪ್ ಕಾಮ್ಸ್ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ ಸ್ವಾಗತಿಸಿದರು. ವ್ಯವಸ್ಥಾಪಕ ನಿದರ್ೇಶಕ ಪ್ರದೀಪ ಡಿ’ಸೋಜ ವಂದಿಸಿದರು.


