ಕಲ್ಲಡ್ಕ ವಲಯ ಬಂಟರ ಸಂಘಕ್ಕೆ ಸಮಗ್ರ ಪ್ರಶಸ್ತಿ
ಬಂಟ್ವಾಳ: ಬಂಟರ ಸಂಘ ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಂಟರ ಸಂಘ ಕಲ್ಲಡ್ಕ ವಲಯವು ಸಮಗ್ರ ಪ್ರಶಸ್ತಿಯನ್ನು ಪಡೆದಿದೆ.
ಕಲ್ಲಡ್ಕ ವಲಯವು ಕಳೆದ ಮೂರು ವರ್ಷಗಳಿಂದ ಸತತವಾಗಿ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.
ಸಮಗ್ರ ಪ್ರಶಸ್ತಿಯನ್ನು ವಲಯ ಬಂಟರ ಸಂಘದ ಅಧ್ಯಕ್ಷ ಕೆ ಪದ್ಮನಾಭ ರೈ, ಕಾರ್ಯದರ್ಶಿಗಳು ಗಣೇಶ್ ಶೆಟ್ಟಿ ಗೋಳ್ತಮಜಲು, ವಲಯ ಬಂಟರ ಸಂಘದ ಪಧಾದಿಕಾರಿಗಳು, ಕ್ರೀಡಾಪಟುಗಳು ಸ್ವೀಕರಿಸಿದರು.
ವೇದಿಕೆಯಲ್ಲಿ ತಾಲ್ಲೂಕು ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಡಿ ಶೆಟ್ಟಿ, ಕಾರ್ಯದರ್ಶಿ ಜಗನ್ನಾಥ ಚೌಟ ಮತ್ತಿತರ ಪಧಾದಿಕಾರಿಗಳು ಉಪಸ್ಥಿತರಿದ್ದರು.