Published On: Sun, Jan 14th, 2024

ನರಿಕೊಂಬು: ಸರಕಾರಿ ಹಿ. ಪ್ರಾ. ಶಾಲೆಯಲ್ಲಿ ನೂತನ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ   ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಶನಿವಾರ ನಡೆಯಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೇದಮೂರ್ತಿ ಕೃಷ್ಣರಾಜ ಭಟ್ ಕರ್ಬೆಟ್ಟು ಧ್ವಜಾರೋಹಣಗೈದು‌ ಪ್ರತಿಭೆಗಳು ಬದುಕನ್ನು ರೂಪಿಸಲು ಸಹಕಾರಿ ಆಗಿದೆ ಎಂದರು.

ಬಳಿಕ ಶಾಲಾ ದೈಹಿಕ ಶಿಕ್ಷಕಿ ಶೋಭಾ ರವರ ಮಾರ್ಗಧರ್ಶನದಲ್ಲಿ ಮಕ್ಕಳಿಂದ ಆಕರ್ಷಕ ವ್ಯಾಯಾಮ ಹಾಗು ವಿವಿಧ ಕಸರತ್ತುಗಳು ನಡೆಯಿತು.

ಇದೇ ವೇಳೆ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನರಿಕೊಂಬು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ, ಪ್ರವೀಣ್ ಸ್ವಾಮೀಜಿ, ತೆಂಗು ಉತ್ಪಾದಕರ ಸೌಹಾರ್ದ ಸಂಘದ ನಿರ್ದೇಶಕ ಪ್ರೇಮನಾಥ್ ಶೆಟ್ಟಿ ಅಂತರ, ಸತ್ಯದೇವತಾ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಹರೀಶ್ ಕುರ್ಚಿಪಲ್ಲ, ವಿಜಯಲಕ್ಷ್ಮಿ ಯುವಕ ಸಂಘದ ಅಧ್ಯಕ್ಷ  ಜಗದೀಶ್ ಬೋರುಗುಡ್ಡೆ, ನಿವೃತ್ತ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಜೋಸಿ, ನಿವೃತ್ತ ಹಿರಿಯ ಮೇಲ್ವಿಚಾರಕಿ ಪುಷ್ಪಲತಾ, ಗ್ರಾಮ ಕರಣಿಕೆ ಯಶ್ವಿತಾ, ನಿವೃತ ಶಿಕ್ಷಕ ನಾರಾಯಣ ನಾಯ್ಕ್, ಮಂಗಳೂರು ಇನ್ಫೋಸಿಸ್ ನ ರೀಮಾ ಮದುರಾಜ್, ಶಿವರಂಜಿನಿ ಕಲಾ ಕೇಂದ್ರ ಬೊಕ್ಕಸದ ಸಂಚಾಲಕಿ ಶಾರದಾ ಬೊಕ್ಕಸ, ಓಂ ಶ್ರೀ ಗೆಳೆಯರ ಬಳಗ ನಾಯಿಲ ಅಧ್ಯಕ್ಷ  ಪ್ರವೀಣ್ ಭಂಡಾರಿ, ನರಿಕೊಂಬು ಬಿರುವೆರ್ ಸೇವಾ ಟ್ರಸ್ಟ್ ನ  ಗೌರವಾಧ್ಯಕ್ಷ ದಿನೇಶ್ ಪಂಡಿತ್ ಮೊದಲಾದವರು ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ಎಂ. ಸ್ವಾಗತಿಸಿ, ಸಹ ಶಿಕ್ಷಕಿ ಹಿರಣ್ಮಯಿ ವಂದಿಸಿದರು, ಶಿಕ್ಷಕಿ ವಿಲ್ಮಾ ಪ್ರೆಸಿಲ್ಲಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.  

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter