ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಮುಹಿಯುದ್ದೀನ್ ಜುಮಾ ಮಸೀದಿಯಿಂದ ವತಿಯಿಂದ ಹೊರೆಕಾಣಿಕೆ
ಕೈಕಂಬ: ಅಮುಂಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾಷ್ಟ ಬ್ರಹ್ಮಕಲಶದ ಪ್ರಯುಕ್ತ ಜ.26ರಂದು ಶುಕ್ರವಾರ ಅಮುಂಜೆ ಮುಹಿಯುದ್ದೀನ್ ಜುಮಾ ಮಸೀದಿ ಇವರ ವತಿಯಿಂದ ದೇವಸ್ಥಾನ್ಕಕೆ ಹೊರೆಕಾಣಿಕೆ ಸಮರ್ಪಿಸಿದರು.


ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶ ಸಮಿತಿ ಹಾಗೂ ಆಡಳಿತ ಮಂಡಳಿಯವರು ಅಮುಂಜೆ ಜುಮಾ ಮಸೀದಿಯ ಸದಸ್ಯರನ್ನು ಸ್ವಾಗತಿಸಿ ಶಾಲು ಹಾಕಿ ಗೌರವಿಸಿದರು.
ಈ ಸಂದರ್ಭದಲ್ಲಿ ಕೊಂಜಾಲುಗುತ್ತು ದಿವಾಕರ ಶೆಟ್ಟಿ, ಅಮುಂಜೆಗುತ್ತು ಯಶೋಧ ಡಿ.ಶೆಟ್ಟಿ, ಅಮುಂಜೆಗುತ್ತು ಜೀವರಾಜ್ ಶೆಟ್ಟಿ, ಅಮುಂಜೆಗುತ್ತು ನಯನ ಜಿ. ಶೆಟ್ಟಿ, ಅಮುಂಜೆಗುತ್ತು ಕೃಷ್ಣಕುಮಾರ ಪೂಂಜ, ಅಮುಂಜೆಗುತ್ತು ಸಂತೋಷ್ ಶೆಟ್ಟಿ, ಅಮುಂಜೆಗುತ್ತು ರಂಗನಾಥ್ ಶೆಟ್ಟಿ, ಅಮುಂಜೆಗುತ್ತು ರವೀಂದ್ರ ಶೆಟ್ಟಿ, ಅಮುಂಜೆಗುತ್ತು ಲಕ್ಷ್ಮೀಪ್ರಸಾದ್ ಶೆಟ್ಟಿ, ಸತ್ಯಪ್ರಸಾದ್ ಶೆಟ್ಟಿ ಅಮುಂಜೆಗುತ್ತು, ದಕ್ಷರಾಜ್ ಶೆಟ್ಟಿ ಅಮುಂಜೆಗುತ್ತು, ನಿಕ್ಷಾ ನಾಯ್ಕ್ ಅಮುಂಜೆಗುತ್ತು, ಅಮುಂಜೆಗುತ್ತು ಪ್ರಫುಲ್ಲ ವಿ. ಶೆಟ್ಟಿ, ಅಮುಂಜೆಗುತ್ತು ಜ್ಯೋತಿ ಎ. ಶೆಟ್ಟಿ, ಅಮುಂಜೆಗುತ್ತು ನಾಗವೇಣಿ ಡಿ. ಶೆಟ್ಟಿ, ಅಮುಂಜೆಗುತ್ತು ವನಿತಾ ಎಸ್. ರೈ, ರಕ್ಷಾ ಮಲ್ಲಿ ಅಮುಂಜೆಗುತ್ತು ಉಪಸ್ಥಿತರಿದ್ದರು.