Published On: Tue, Feb 6th, 2024

ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರ ದವಸ ಧಾನ್ಯ ವಿತರಣೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ್ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಪೌಷ್ಟಿಕ ಆಹಾರ ದವಸಧಾನ್ಯ ವಿತರಣ ಕಾರ್ಯಕ್ರಮ ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಆಶ್ರಯದಲ್ಲಿ ಬ್ಯಾಂಕ್ ಆಫ್ ಬರೋಡ ಇದರ ಸಹಕಾರದೊಂದಿಗೆ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ಸೋಮವಾರ ನಡೆಯಿತು.

ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸ್ ನಿರೀಕ್ಷಕ ಶಿವ ಕುಮಾರ್ ಪಿ. ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಕೆ. ಎಸ್.‌ಹೆಗ್ಡೆ ಆಸ್ಪತ್ರೆಯ ಸಹಕಾರದೊಂದಿಗೆ ಕೃಷ್ಣಕುಮಾರ್ ಪೂಂಜ ಅವರು ಕಳೆದ 40  ವರ್ಷಗಳಿಂದ ಸೇವಾ ಕಾರ್ಯಕಮವನ್ನು ನಡೆಸಿಕೊಂಡು ಬರುತ್ತಿರುವುದು ಹೆಮ್ಮೆಯ ವಿಚಾರ ಎಂದರು.‌

ಕ್ಷಯ ರೋಗಿಗಳು ಇಲ್ಲಿ ನೀಡುವ ಪೌಷ್ಟಿಕ ಆಹಾರವನ್ನು ಸೇವಿಸಿಕೊಂಡು ರೋಗ ಮುಕ್ತರಾಗಿ ಆರೋಗ್ಯವಂತ ಜೀವನ ನಡೆಸಬೇಕೆಂದು ತಿಳಿಸಿದರು.

ಸೇವಾಂಜಲಿ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ಕೃಷ್ಣ ಕುಮಾರ್ ಪೂಂಜ ಮಾತನಾಡಿ ಕಳೆದ 17 ತಿಂಗಳಿನಿಂದ ಈ ಕಾರ್ಯಕ್ರಮವನ್ನು ದಾನಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ನಡಸಲಾಗುತ್ತಿದ್ದು, ಸುಮಾರು‌ 6 ಲಕ್ಷ ರೂಪಾಯಿ ಖರ್ಚು ಮಾಡಿ ಇದುವರೆಗೆ ಸುಮಾರು 98 ಕ್ಷಯ ರೋಗಿಗಳನ್ನು ಗುರುತಿಸಿ ಅವರಿಗೆ ಆಹಾರದ ಕಿಟ್ ವಿತರಿಸಲಾಗಿದೆ ಎಂದರು.

ಬ್ಯಾಂಕ್ ಆಫ್ ಬರೋಡ ಅರ್ಕುಳ ಶಾಖೆಯ ಪ್ರಬಂಧಕ ಎಂ. ಪ್ರಶಾಂತ್ ಕುಮಾರ್, ಸಾಮಾಜಿಕ ಕಾರ್ಯಕರ್ತ ಸುನೀಲ್ ಫೆರ್ನಾಂಡೀಸ್ ಅಬ್ಬೆಟ್ಟು ವೇದಿಕೆಯಲ್ಲಿದ್ದರು.

ಪ್ರಮುಖರಾದ ಪ್ರಕಾಶ್ ಕಿದೆಬೆಟ್ಟು, ಸುರೇಶ್ ರೈ ಪೆಲಪಾಡಿ, ಸುಕುಮಾರ್ ಅರ್ಕುಳ, ವಿಕ್ರಂ ಬರ್ಕೆ, ಪ್ರಶಾಂತ್ ತುಂಬೆ,‌ ದಿನೇಶ್ ತುಂಬೆ
ಆಶಾ ಕಾರ್ಯಕರ್ತೆಯರು ಮತ್ತಿತರರು ಉಪಸ್ಥಿತರಿದ್ದರು.

ಟ್ರಸ್ಟಿಗಳಾದ ದೇವದಾಸ್ ಶೆಟ್ಟಿ ಕೊಡ್ಮಾಣ್ ವಂದಿಸಿದರು, ತೇವು ತಾರಾನಾಥ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter