Published On: Sat, Feb 10th, 2024

ಬಂಟ್ವಾಳ ತಾಲೂಕು ಆಡಳಿತದಿಂದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ

ಬಂಟ್ವಾಳ: ಸರ್ಕಾರಿ ನೌಕರರು ಜೀತ ಪದ್ಧತಿಯ ಬಗ್ಗೆ ಸದಾ ಜಾಗೃತರಾಗಿದ್ದು, ಸಾರ್ವಜನಿಕರಲ್ಲಿ ಅಧಿಕಾರಿಗಳು ಈ ಕುರಿತು ಅರಿವು ಮೂಡಿಸುವುದರೊಂದಿಗೆ ಜೀತ ಪದ್ಧತಿಯ ಸಂಪೂರ್ಣ ನಿರ್ಮೂಲನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕು ಎಂದು ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಹೇಳಿದರು.

ಬಂಟ್ವಾಳ ತಾಲೂಕಾಡಳಿತದ ಸಭಾಂಗಣದಲ್ಲಿ ಶುಕ್ರವಾರ ನಡೆದ ಜೀತ ಪದ್ಧತಿ ನಿರ್ಮೂಲನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಜೀತ ಪದ್ಧತಿ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಕೇಂದ್ರ ಸ್ಥಾನಿಯ ಉಪತಹಸೀಲ್ದಾರ್ ನರೇಂದ್ರನಾಥ ಮಿತ್ತೂರು, ರಾಜೇಶ್ ನಾಯ್ಕ್, ಕಂದಾಯ ನಿರೀಕ್ಷಕರಾದ ಆರ್ .ವಿಜಯ್, ಜನಾರ್ದನ್.ಜೆ, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಆಡಳಿತ ಅಧಿಕಾರಿಗಳು, ಗ್ರಾಮ ಸಹಾಯಕರು ಉಪಸ್ಥಿತರಿದ್ದರು 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter