Published On: Mon, Feb 12th, 2024

ತುಂಬೆ:ದೇವಳದ ಬ್ರಹ್ಮಕಲಶ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರದ ಪುನಃ ಪ್ರತಿಷ್ಠೆ ಅಷ್ಟಬಂಧ,ಬ್ರಹ್ಮಕಲಶಾಭಿಷೇಕ, ಧ್ವಜಸ್ತಂಭ ಪ್ರತಿಷ್ಠೆ ಹಾಗೂ ಜಾತ್ರಾ ಮಹೋತ್ಸವವು ಫೆ. 13ರಿಂದ 23ರ ವರೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ಬೃಹತ್ ಹೊರೆಕಾಣಿಕೆ ಮೆರವಣಿಗೆ ನಡೆಯಿತು‌.

ಬಿ.ಸಿ.ರೋಡ್‌ನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಬಳಿ ವಿವಿಧ ಗಣ್ಯರ ಸಮ್ಮುಖದಲ್ಲಿ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.

ಜೀರ್ಣೋದ್ದಾರ-ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಅಧ್ಯಕ್ಷತೆ ವಹಿಸಿದ್ದರಜ  ಹೊರೆಕಾಣಿಕೆ ಸಮಿತಿ ಸಂಚಾಲಕ ಪ್ರಕಾಶ್ ಬಿ.ಶೆಟ್ಟಿ,ಶ್ತೀ ರಕ್ತೇಶ್ವರೀ ದೇವಿ ದೇವಳದ ಆಡಳಿತ ಸಮಿತಿ ಅಧ್ಯಕ್ಷ ಬಿ.ವಿಶ್ವನಾಥ್ ಸೇರಿದಂತೆ ವಿವಿಧ ಸಮಿತಿ ಪ್ರಮುಖರು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter