ಹೃದ್ರೋಗ ತಜ್ಞ ಡಾ.ಪದ್ಮನಾಭ ಕಾಮತ್ ಗೆ ಗೌರವಾರ್ಪಣೆ
ಬಂಟ್ವಾಳ: ಮಂಗಳೂರಿನ ಖ್ಯಾತ ಹೃದ್ರೋಗ ತಜ್ಞ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಮೆಚ್ಚುಗೆಗೆ ಪಾತ್ರರಾಗಿರುವ ಡಾ.ಪದ್ಮನಾಭ ಕಾಮತ್ ರವರು ಶುಕ್ರವಾರ ಸಿದ್ದಕಟ್ಟೆ ಪದ್ಮ ಕ್ಲಿನಿಕ್ ಆಸ್ಪತ್ರೆಗೆ ಭೇಟಿ ನೀಡಿ ಸದಾಕಾಲ ವೈದ್ಯಕೀಯ ಸೇವೆಯಲ್ಲಿ ನಿರತರಾಗಿರುವ ಡಾ. ಪ್ರಭಾಚಂದ್ರ ಜೈನ್ ರವರಿಗೆ ಸ್ಮರಣಿಕೆ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಿದ್ದಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು, ನಿವೃತ್ತ ಮುಖ್ಯ ಶಿಕ್ಷಕ ಕೆ. ಗಣೇಶ್ ನಾಯಕ್ ಕರ್ಪೆ, ಸ್ಥಳೀಯ ಪ್ರಮುಖರಾದ ರಾಜೇಶ್ ಶೆಟ್ಟಿ ಕೊನೆರಬೆಟ್ಟು, ಉಮೇಶ್ ಗೌಡ, ಕರುಣಾಕರ ಗೌಡ, ಅಂಚೆ ಇಲಾಖೆಯ ವಿಶ್ವನಾಥ ನಾಯಕ್, ಮತ್ತಿತರರು ಉಪಸ್ಥಿತರಿದ್ದರು.