Published On: Sat, Apr 13th, 2024

ಕಮಿಷನಿಂಗ್‌ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಬಂಟ್ವಾಳ: ಮೊಡಂಕಾಪಿನಲ್ಲಿರುವ ಇನ್ಫೆಂಟ್‌ ಜೀಸಸ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಏ.13ರಂದು ಶನಿವಾರ ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205 ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಬಳಸಲಾಗುವ ಮತಯಂತ್ರಗಳ ಕಮಿಷನಿಂಗ್‌ ಕಾರ್ಯವು ನಡೆಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ಕಮಿಷನಿಂಗ್‌ ಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದರು.

ಪೂರ್ವಾಹ್ನ 6.00 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತಾವೇ ಸ್ವತಃ ಮಧ್ಯಾಹ್ನದ ಊಟವನ್ನು ಬಡಿಸಿ, ಪ್ರಶಂಸೆ ವ್ಯಕ್ತಪಡಿಸಿದರು.

205-ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ಚುನಾವಣಾ ನೋಡಲ್ ಅಧಿಕಾರಿ ರಾಜು ಮೋಗವೀರ, ತಹಶೀಲ್ದಾರ್‌ ಅರ್ಚನಾ ಭಟ್‌, ಸೆಕ್ಟರ್ ಅಧಿಕಾರಿಗಳು, ಚುನಾವಣಾ ಉಪತಹಶೀಲ್ದಾರ್‌ ನವೀನ್‌ ಕುಮಾರ್‌ ಬೆಂಜನಪದವು, ಉಪತಹಸೀಲ್ದಾರ್ ದಿವಾಕರ ಮುಗಳಿಯ, ವಿಷಯ ನಿರ್ವಾಹಕ ಮಂಜುನಾಥ ಕೆ ಹೆಚ್‌, ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ವರ್ಗ, ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter