Published On: Wed, Jun 5th, 2024

ಸಜೀಪಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ವಿತರಣಾ ಕಾರ್ಯಕ್ರಮ

ಬಂಟ್ವಾಳ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪಾಣೆಮಂಗಳೂರು ವಲಯ. ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ   ಸಜಿಪಮೂಡ ಇದರ  ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಜೀಪಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ  ಹಾಗೂ ಗಿಡ  ವಿತರಣಾ ಕಾರ್ಯಕ್ರಮ ನಡೆಸಲಾಯಿತು.


ಸಜೀಪಮೂಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಶೆಟ್ಟಿ, ಜನಜಾಗೃತಿ ವಲಯ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ, ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಗ್ರಾಮ ಪಂಚಾಯಿತ್  ಮಾಜಿ ಅಧ್ಯಕ್ಷ ದೇವಿ ಪ್ರಸಾದ್ ಪೂಂಜಾ,  ಒಕ್ಕೂಟದ ಅಧ್ಯಕ್ಷೆ ಹರಿಣಾಕ್ಷಿ, ಶಾಲಾಮುಖ್ಯೋಪಾಧ್ಯಯೆ ವತ್ಸಲಾ  ಉಪಸ್ಥಿತರಿದ್ದರು.


ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ಇದರಿಂದ  ಉಂಟಾಗುವ  ದುಷ್ಪರಿಣಾಮದ ಬಗ್ಗೆ ಮಾಹಿತಿಯನ್ನು ನೀಡಲಾಯಿತಲ್ಲದೆ  ಶಾಲಾ ಆವರಣದಲ್ಲಿ  ಹಣ್ಣಿನ ಗಿಡ ನಾಟಿ ಮಾಡಲಾಯಿತು.
ಇದೇ ವೇಳೆ ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧ ಪಟ್ಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸದಸ್ಯರಿಗೆ ಕಾಡುತ್ಪತ್ತಿ ಗಿಡಗಳನ್ನು ವಿತರಿಸಲಾಯಿತು.  ಮಾಡಿ ವಿಭಾಗದ ಸೇವಾಪ್ರತಿನಿಧಿ ಬಬಿತ ಸ್ವಾಗತಿಸಿದರು.  ಶಾಲಾ ಶಿಕ್ಷಕಿ ಜೆಸಿಂತಾ  ಮೋರಸ್ ವಂದಿಸಿದರು.ವಲಯದ  ಮೇಲ್ವಿಚಾರಕಿ ಅಮಿತ ರವರು ಕಾರ್ಯಕ್ರಮ ನಿರೂಪಿಸಿದರು 

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter