ಜೂ.೧೬ರಂದು ಪೊಳಲಿ “ರಾಮಕೃಷ್ಣ ವಿದ್ಯಾದೇಗುಲ” ಕ್ಕೆ ಭೂಮಿ
ಪೊಳಲಿ :ಭಗವಾನ್ ಶ್ರೀ ರಾಮಕೃಷ್ಣ ಪರಮಹಂಸರ ಕೃಪೆಯಿಂದ ಪಲ್ಲಿಪಾಡಿಯಲ್ಲಿ ನಿಮಾಣವಾಗಲಿರುವ “ರಾಮಕೃಷ್ಣ ವಿದ್ಯಾದೇಗುಲ”ಕ್ಕೆ ಜೂ.೧೬ರಂದು ಭಾನುವಾರ ಬೆಳಗ್ಗೆ ೮.೩೦ಕ್ಕೆ ಭೂಮಿ ಪೂಜೆ ನೆರವೇರಲಿದೆ.
ಮಂಗಳೂರು ರಾಮಕೃಷ್ಣ ಮಠದ ಅಧ್ಯಕ್ಷರಾದ ಪೂಜ್ಯ ಸ್ವಾಮಿ ಜಿತಕಾಮಾನಂದಜಿ ಮಹಾರಾಜ್ ಶಿಲಾನ್ಯಾಸವನ್ನು ನೆರವೇರಿಸಿ ಆಶೀರ್ವದಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಶೃಈ ಎನ್ ವಿನಯ್ ಹೆಗ್ಡೆ , ಎಮ್ ಅರ್ ಜಿ ಗ್ರೂಪ್ ಅಧ್ಯಕ್ಷರು ಪ್ರಕಾಶ್ ಶೆಟ್ಟಿ ,ದ.ಕ.ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಂಟ್ವಾಳ ಶಾಸಕ ರಾಜೇಶ್ ನಾöÊಕ್ , ಮಾಜಿ ಸಚಿವ ಬಿ.ರಮಾನಾಥ ರೈ ಹಾಗೂ ಬಡಗಬೆಳ್ಳೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರೂಪಶ್ರೀ ,ಕರಿಯಂಗಳ ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಧ ಲೋಕೇಶ್ ಉಪಸ್ಥಿತರಿರುವರು. ಎಂದು ಪೊಳಲಿ ರಾಮಕೃಷ್ಣ ತಪೋವನದ ಅಧ್ಯಕ್ಷರಾದ ಸ್ವಾಮಿ ವಿವೇಕಚೈತನ್ಯಾನಂದ ಪ್ರಕಟನೆಯಲ್ಲಿ ತಿಳಿಸಿದ್ದಾರೆ.