ಬಂಟ್ವಾಳ ವಿದ್ಯಾಗಿರಿ ಶ್ರೀ ವೆಂಕಟರಮಣ ಸ್ವಾಮಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತಿನ ರಚನೆ
ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಚುನಾವಣಾ ಪ್ರಕ್ರಿಯೆಯ ಅರಿವು ಮೂಡಿಸುವ ನಿಟ್ಟಿನಲ್ಲಿ ೨೦೨೪-೨೫ ನೇ ಸಾಲಿನ ವಿದ್ಯಾರ್ಥಿ ಸಂಸತ್ತಿನ ರಚನೆಯು ಶನಿವಾರ ನಡೆಯಿತು.

ಇದರ ಪ್ರಯುಕ್ತ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶಿಕ್ಷಕಿ ಚೈತ್ರ ಶೆಟ್ಟಿ ಮತ್ತು ಸಂಘದ ಸದಸ್ಯರ ನೇತೃತ್ವದಲ್ಲಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ ಮತ್ತು ಚುನಾವಣಾ ಪ್ರಚಾರದೊಂದಿಗೆ ಮತದಾನವು ಯಶಸ್ವಿಯಾಗಿ ನಡೆಸಲಾಯಿತು.

ಆಧುನಿಕ ತಂತ್ರಜ್ಞಾನದ ಮೂಲಕ ವಿದ್ಯಾರ್ಥಿಗಳು ಮತಚಲಾಯಿಸಿದರು. ವಿದ್ಯಾರ್ಥಿ ಸಂಘದ ನಾಯಕರಾಗಿ 10 ನೇ ತರಗತಿಯ ಅರ್ಪಣ್ ರೈ,ಉಪನಾಯಕನಾಗಿ 9 ನೇ ತರಗತಿಯ ರೋಹನ್ ಹೆಚ್ ಎಸ್,10 ನೇ ತರಗತಿಯ
ಯಕ್ಷ ಆರ್ ಶೆಟ್ಟಿ ಯೋಜನಾಧಿಕಾರಿಯಾಗಿ ಆಯ್ಕೆಯಾದರು.
ಪ್ರೌಢಶಾಲಾ ಮುಖ್ಯೋಪಾಧ್ಯಯರಾದ ಹರಿಪ್ರಸಾದ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಯರಾದ ಸತೀಶ್ ಬಂಗೇರ ಮತ್ತು ಪೂರ್ವಪ್ರಾಥಮಿಕ ವಿಭಾಗದ ಮುಖ್ಯಶಿಕ್ಷಕಿಯಾದ ಹೇಮಲತಾ ಇವರ ಮಾರ್ಗದರ್ಶನ ನೀಡಿದರು.