Published On: Thu, Jun 20th, 2024

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚುನಾವಣೆ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “೨೦೨೪-೨೫ನೇ ಶೈಕ್ಷಣಿಕ ವರ್ಷದ ಶಾಲಾ ಸಂಸತ್ ಚುನಾವಣೆ”ಯು ನಡೆಯಿತು.ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕನ ಆಯ್ಕೆ, ಮತದಾನ, ಪ್ರಜಾಪ್ರಭುತ್ವದ ಮಹತ್ವ ಹಾಗೂ ಚುನಾವಣೆ ಪ್ರಕ್ರಿಯೆಯನ್ನು ತಿಳಿಸುವ ನಿಟ್ಟಿನಲ್ಲಿ ಹಾಗೂ  ನಾಯಕತ್ವ ಗುಣಗಳನ್ನು ಬೆಳೆಸಲು ಈ ಮತದಾನವನ್ನು ಹಮ್ಮಿಕೊಳ್ಳಲಾಗಿತ್ತು. 

ಚುನಾವಣೆ ಅಧಿಸೂಚನೆಯ ಮೂಲಕ ಆರಂಭಗೊಂಡ ಪ್ರಕ್ರಿಯೆಯು ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂತೆಗೆತ ಹಾಗೂ ಚುನಾವಣಾ ಪ್ರಚಾರ ನಡೆದು, ಚುನಾವಣೆಯ ದಿನ ಎಲ್ಲಾ ವಿದ್ಯಾರ್ಥಿಗಳು ತಮ್ಮ ಗುರುತಿನ ಚೀಟಿಯೊಂದಿಗೆ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. 

 ಮತ ಚಲಾಯಿಸಿದ ವಿದ್ಯಾರ್ಥಿಗಳ ಕೈ ಬೆರಳಿಗೆ ಶಾಯಿಯನ್ನು ಹಾಕಲಾಯಿತು. ತಮ್ಮ ಕೈಯಲ್ಲಿರುವ ಶಾಯಿಯನ್ನು ಕಂಡು ವಿದ್ಯಾರ್ಥಿಗಳು ಸಂಭ್ರಮಿಸಿದರು.

ಒಟ್ಟು ೧೦ ಮತಗಟ್ಟೆಗಳನ್ನು ರಚಿಸಿದ್ದು, ಒಂದೊಂದು ಮತಕ್ಷೇತ್ರಕ್ಕೆ ಪುಣ್ಯಕ್ಷೇತ್ರಗಳಾದ ಅಯೋಧ್ಯೆ, ಮಥುರಾ, ಕಾಶಿ, ಪ್ರಯಾಗ, ವಿಜಯನಗರ, ಕನ್ಯಾಕುಮಾರಿ, ರಾಮೇಶ್ವರ, ಇಂದ್ರಪ್ರಸ್ಥ, ಕಂಚಿ, ಶೃಂಗೇರಿ ಎಂಬ ಹೆಸರನ್ನು ಸೂಚಿಸಲಾಗಿತ್ತು.

 ಈ ೧೦ ಕ್ಷೇತ್ರಗಳಲ್ಲಿ ಶಾಲಾ ನಾಯಕ, ಕ್ರೀಡಾ ಮಂತ್ರಿ, ಆರೋಗ್ಯ ಮಂತ್ರಿ, ಸ್ವಚ್ಛತಾ ಮಂತ್ರಿ ಹೀಗೆ ಹಲವು ಮಂತ್ರಿಗಳ ಸ್ಥಾನಕ್ಕೆ ಅಭ್ಯರ್ಥಿಗಳು ನಿಂತಿದ್ದು, ೫, ೬ ಮತ್ತು ೭ನೇ ತರಗತಿಯ ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಅವಕಾಶವನ್ನು ನೀಡಲಾಯಿತು. 

ಸಹಮುಖ್ಯೋಪಾಧ್ಯಾಯರಾದ ಸುಮಂತ್ ಆಳ್ವ ಎಮ್ ಮೊದಲ ಮತದಾನ ಮಾಡುವ ಮೂಲಕ ಚಾಲನೆ ನೀಡಿದರು. 

ಚುನಾವಣೆ ಅಧಿಕಾರಿಯಾಗಿ ಅಧ್ಯಾಪಕರಾದ ರಾಜೇಶ್ವರಿ ಎಂ. ಕಾರ್ಯನಿರ್ವಹಿಸಿದರು. ಅಧ್ಯಾಪಕ ವೃಂದದವರು ಸಹಕರಿಸಿದರು.

Leave a comment

XHTML: You can use these html tags: <a href="" title=""> <abbr title=""> <acronym title=""> <b> <blockquote cite=""> <cite> <code> <del datetime=""> <em> <i> <q cite=""> <s> <strike> <strong>

Get Immediate Updates .. Like us on Facebook…

Visitors Count Visitor Counter